Asianet Suvarna News Asianet Suvarna News

ಚಾಮರಾಜನಗರ ದುರಂತ: ಅನುಮಾನ ಮೂಡಿಸುತ್ತಿದೆ ಡಿಸಿಗಳ ದ್ವಂದ್ವ ಹೇಳಿಕೆ

ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಭಾನುವಾರ ಒಂದೇ ದಿನ 24 ರೋಗಿಗಳು ಮೃತಪಟ್ಟಿದ್ದು, ಇದಕ್ಕೆ ಆಕ್ಸಿಜನ್ ಕೊರತೆಯೇ ಕಾರಣ ಎಂದು ಆರೋಪ ಕೇಳಿ ಬಂದಿದೆ. 

ಬೆಂಗಳೂರು (ಮೇ. 04): ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಭಾನುವಾರ ಒಂದೇ ದಿನ 24 ರೋಗಿಗಳು ಮೃತಪಟ್ಟಿದ್ದು, ಇದಕ್ಕೆ ಆಕ್ಸಿಜನ್ ಕೊರತೆಯೇ ಕಾರಣ ಎಂದು ಆರೋಪ ಕೇಳಿ ಬಂದಿದೆ. ಚಾಮರಾಜನಗರಕ್ಕೆ 250 ಸಿಲಿಂಡರ್ ರವಾನೆ ಮಾಡಿದ್ದೇವೆ ಎಂದು ಮೈಸೂರು ಡಿಸಿ ಹೇಳಿದರೆ, ಮೈಸೂರಿನಿಂದ 60 ಆಕ್ಸಿಜನ್ ಸಿಲಿಂಡರ್ ಮಾತ್ರ ಬಂದಿದೆ ಎಂದು ಚಾಮರಾಜನಗರ ಡಿಸಿ ಹೇಳುತ್ತಾರೆ.