Asianet Suvarna News Asianet Suvarna News

ಪೊಲೀಸರಿಂದ ಕಾಟಾಚಾರದ ಚೆಕ್; ಬೆಂಗಳೂರಿಗೆ ತಮಿಳುನಾಡಿನ ಡೆಡ್ಲಿ ವೈರಸ್ ಎಂಟ್ರಿ..!

ತಮಿಳಿನಾಡಿನಿಂದ ಬೈಕ್, ಸ್ಕೂಟರ್‌ಗಳಲ್ಲಿ ಬರುತ್ತಿದ್ದು, ಕಂಪನಿ ಐಡಿ ಕಾರ್ಡ್ ತೋರಿಸಿ ಬೆಂಗಳೂರಿಗೆ ತಮಿಳಿಗರು ಎಂಟ್ರಿ ಕೊಡುತ್ತಿದ್ದಾರೆ. ಗಡಿಯಲ್ಲಿ ಪೊಲೀಸರಿಂದ ಕಾಟಾಚಾರದ ತಪಾಸಣೆ ನಡೆಸುತ್ತಿದ್ದಾರೆ.

ಬೆಂಗಳೂರು(ಮೇ.22): ಮುಂಬೈ ಸಂಪರ್ಕ ಈಗಾಗಲೇ ಕರ್ನಾಟಕವನ್ನು ಕಂಗೆಡಿಸಿದೆ. ಇದರ ಬೆನ್ನಲ್ಲೇ ತಮಿಳುನಾಡಿನ ಮಂದಿ ಅತ್ತಿಬೆಲೆ ದಾಟಿ ಬೆಂಗಳೂರಿನ ಕಡೆ ಬರುತ್ತಿರುವ ಆಘಾತಕಾರಿ ಸುದ್ದಿ ಇದೀಗ ಬೆಳಕಿಗೆ ಬಂದಿದೆ.

ಬೈಕ್, ಸ್ಕೂಟರ್‌ಗಳಲ್ಲಿ ಬರುತ್ತಿದ್ದು, ಕಂಪನಿ ಐಡಿ ಕಾರ್ಡ್ ತೋರಿಸಿ ಬೆಂಗಳೂರಿಗೆ ತಮಿಳಿಗರು ಎಂಟ್ರಿ ಕೊಡುತ್ತಿದ್ದಾರೆ. ಗಡಿಯಲ್ಲಿ ಪೊಲೀಸರಿಂದ ಕಾಟಾಚಾರದ ತಪಾಸಣೆ ನಡೆಸುತ್ತಿದ್ದಾರೆ.

ಇಂದಿನಿಂದ ಜೆಜೆಎಂನಲ್ಲೇ ಕೋವಿಡ್‌-19 ಪರೀಕ್ಷೆ

ಕೊರೋನಾ ಸೋಂಕು ಹೆಚ್ಚಳದಿಂದ ಈಗಾಗಲೇ ತಮಿಳುನಾಡು ತತ್ತರಿಸಿ ಹೋಗಿದೆ. ಕೆಲವರು ಕಳ್ಳದಾರಿಯ ಮೂಲಕ ಉದ್ಯಾನನಗರಿಯನ್ನು ತಲುಪುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.