Asianet Suvarna News Asianet Suvarna News

ಕೊರೋನಾ ವಿರುದ್ಧ ಸಮರ, ಏ.25ರಂದು ಮೊದಲ ಬಾರಿಗೆ ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ

ಬಿಎಂಸಿ ವಿಕ್ಟೋರಿಯಾ ಮೆಡಿಕಲ್ ಕಾಲೇಜಿನಲ್ಲಿ ನಾಳೆ (ಏ.25) ಪ್ಲಾಸ್ಮಾ ಥೆರಪಿಯನ್ನು ಮೊದಲ ರೋಗಿಗೆ ಮಾಡಲಿದ್ದೇವೆ. ಥೆರಪಿಗೆ ದಾನಿಯೂ ಸಿಕ್ಕಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ‌.ಸುಧಾಕರ್ ಹೇಳಿದ್ದಾರೆ.

ಬೆಂಗಳೂರು, (ಏ.24): ಬಿಎಂಸಿ ವಿಕ್ಟೋರಿಯಾ ಮೆಡಿಕಲ್ ಕಾಲೇಜಿನಲ್ಲಿ ನಾಳೆ (ಏ.25) ಪ್ಲಾಸ್ಮಾ ಥೆರಪಿಯನ್ನು ಮೊದಲ ರೋಗಿಗೆ ಮಾಡಲಿದ್ದೇವೆ. ಥೆರಪಿಗೆ ದಾನಿಯೂ ಸಿಕ್ಕಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ‌.ಸುಧಾಕರ್ ಹೇಳಿದ್ದಾರೆ.

ಇಂದು (ಶುಕ್ರವಾರ) ಕೇಂದ್ರದ ಆರೋಗ್ಯ ಸಚಿವ ಹರ್ಷವರ್ಧನ್​ರೊಂದಿಗೆ ವಿಡಿಯೋ ಸಂವಾದ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸುಧಾಕರ್, ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ನಡೆಯಲಿದೆ ಎಂದರು.