
40% Commission Row:ಸದ್ದಿಲ್ಲದೇ ಫೀಲ್ಡಿಗಿಳಿದ ಮೋದಿ ಟೀಂ: ಅಂದು ಆರೋಪಿಸಿದವರಿಗೆ ಈಗ ಸಾಕ್ಷಿ ಕೊಡುವ ಸಮಯ!
* ರಾಜ್ಯ ಸರ್ಕಾರದ ಮೇಲೆ 40 ಪರ್ಸೆಂಟ್ ಕಮಿಷನ್ ಆರೋಪ
* ಆರೋಪದ ತನಿಖೆಗಾಗಿ ಬೆಂಗಳೂರಿಗೆ ಬಂದ ಪ್ರಧಾನಿ ಮೋದಿ ಟೀಂ
* 40 ಪರ್ಸೆಂಟ್ ಕಮಿಷನ್ ಆರೋಪದ ದಾಖಲೆಗಳನ್ನ ಕಲೆ ಹಾಕುತ್ತಿರುವ ಮೋದಿ ತಂಡ
ಬೆಂಗಳೂರು(ಜೂ.29): ಕೆಲ ತಿಂಗಳ ಹಿಂದೆ 40 ಪರ್ಸೆಂಟ್ ಕಮಿಷನ್ ಆರೋಪ ರಾಜ್ಯ ಸರ್ಕಾರದ ಮೇಲೆ ಕೇಳಿ ಬಂದಿತ್ತು. ಇದೇ ಕಾರಣಕ್ಕಾಗಿ ಬೆಳಗಾವಿಯ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂಬ ಆರೋಪವೂ ಕೇಳಿ ಬಂದಿತ್ತು. ಇದರ ಪರಿಣಾಮವಾಗಿ ಸಚಿವರೊಬ್ಬರು ಕುರ್ಚಿಯಿಂದ ಇಳಿಯಬೇಕಾಯಿತು. ರಾಜ್ಯ ಸರ್ಕಾರದ ಮೇಲೆ ಕೇಳಿ ಬಂದ ಈ ಆರೋಪದ ತನಿಖೆಗಾಗಿ ಪ್ರಧಾನಿ ನರೇಂದ್ರ ಮೋದಿ ಟೀಂ ಬೆಂಗಳೂರಿಗೆ ಬಂದಿದೆಯಂತೆ. 40 ಪರ್ಸೆಂಟ್ ಕಮಿಷನ್ ಆರೋಪದ ದಾಖಲೆಗಳನ್ನ ಕಲೆ ಹಾಕುತ್ತಿದೆಯಂತೆ. ಈ ಕುರಿತಾದ ಕಂಪ್ಲೀಟ್ ಮಾಹಿತಿ ಈ ವಿಡಿಯೋದಲ್ಲಿದೆ.
Add Asianetnews Kannada as a Preferred Source
