EXCLUSIVE ಡಿಕೆಶಿ, ಪರಂ ಆಯ್ತು, ಈಗ ಸಿದ್ದರಾಮಯ್ಯ ಇನ್ ಬಿಗ್ ಟ್ರಬಲ್!
ಈಗಾಗಲೇ ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ ಜೈಲುವಾಸ ಅನುಭವಿಸಿ ಹೊರ ಬಂದಿದ್ದಾರೆ. ಇನ್ನೊಂದು ಕಡೆ, ಮಾಜಿ ಡಿಸಿಎಂ ಡಾ. ಪರಮೇಶ್ವರ್ ನಿವಾಸ ಮತ್ತು ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ರಾಜ್ಯದ ಜನ ಬೆಚ್ಚಿಬೀಳುವಂತಹ ಸುದ್ದಿಯೊಂದು ಇಲ್ಲಿದೆ. ಸಿದ್ದರಾಮಯ್ಯ ಮತ್ತು ಅವರ ಆಪ್ತ ಕೆ.ಜೆ. ಜಾರ್ಜ್ಗೆ ದೊಡ್ಡ ಸಂಕಷ್ಟ ಎದುರಾಗಿದೆ.
ಬೆಂಗಳೂರು. (ಅ.31): ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಕಾಂಗ್ರೆಸ್ ನಾಯಕರ ಬಂಡವಾಳ ಬಯಲಾಗುತ್ತಿದೆ. ಈಗಾಗಲೇ ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಜೈಲುವಾಸ ಅನುಭವಿಸಿ ಹೊರ ಬಂದಿದ್ದಾರೆ.
ಇನ್ನೊಂದು ಕಡೆ, ಮಾಜಿ ಡಿಸಿಎಂ ಡಾ. ಪರಮೇಶ್ವರ್ ನಿವಾಸ ಮತ್ತು ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಕಲೆಹಾಕಿದ್ದಾರೆ.
ಇವುಗಳ ಬೆನ್ನಲ್ಲೇ ರಾಜ್ಯದ ಜನ ಬೆಚ್ಚಿಬೀಳುವಂತಹ ಸುದ್ದಿಯೊಂದು ಸುವರ್ಣನ್ಯೂಸ್ ನಿಮ್ಮ ಮುಂದಿಡುತ್ತಿದೆ. ಸಿದ್ದರಾಮಯ್ಯ ಮತ್ತು ಅವರ ಆಪ್ತ, ಕಾಂಗ್ರೆಸ್ ನ ATM ಮಶೀನ್ ಎಂದೇ ಕರೆಯಲ್ಪಡುವ ಕೆ.ಜೆ. ಜಾರ್ಜ್ ಗೆ ದೊಡ್ಡ ಸಂಕಷ್ಟ ಎದುರಾಗಿದೆ.