Asianet Suvarna News Asianet Suvarna News

2 ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ; ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ

ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯ ರೈತ ಸಂಘ, ಕಾರ್ಮಿಕ ಸಂಘಟನೆಗಳು ರಸ್ತೆಗಿಳಿದಿವೆ. 
 

ಬೆಂಗಳೂರು (ಸೆ. 22): ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯ ರೈತ ಸಂಘ, ಕಾರ್ಮಿಕ ಸಂಘಟನೆಗಳು ರಸ್ತೆಗಿಳಿದಿವೆ. 

ಕೃಷಿ ಮಸೂದೆ ಖಂಡಿಸಿ ಸರ್ಕಾರದ ವಿರುದ್ಧ ಅನ್ನದಾತರ ಸಮರ; ಬೀದಿಗಿಳಿದಿದ್ದಾರೆ ರೈತರು

ಬೆಂಗಳೂರಿನ ಫ್ರೀಡಂ ಪಾರ್ಕ್ ರಸ್ತೆಯುದ್ದಕ್ಕೂ ಮಲಗಿ ಪ್ರತಿಭಟನೆ ನಡೆಸುತ್ತಿದ್ದಾರೆ. 30 ಕ್ಕೂ ಹೆಚ್ಚು ರೈತ  ಸಂಘಟನೆಗಳು ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿವೆ. ಈ ಕಾಯ್ದೆಯನ್ನು ಅಂಗೀಕರಿಸುವ ತೀರ್ಮಾನವನ್ನು ಯಾವುದೇ ಕಾರಣಕ್ಕೂ ತೆಗೆದುಕೊಳ್ಳಬಾರದು ಎಂಬ ಕಾರಣಕ್ಕೆ ಅಧಿವೇಶನ ಮುಗಿಯುವ ತನಕ ಗಾಂಧಿ ಪ್ರತಿಮೆ ಮುಂಭಾಗ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ಧಾರೆ. 

Video Top Stories