Transformer Blast: ಬೇಜವಾಬ್ದಾರಿ ಬೆಸ್ಕಾಂ ವಿರುದ್ಧ ಸ್ಥಳೀಯರ ಆಕ್ರೋಶ

ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರಸ್ತೆ ಬದಿಯ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದವರಿಗೆ ಬೆಂಕಿ ತಾಕಿದ ಪರಿಣಾಮ ತಂದೆ - ಮಗಳು ಮೃತಪಟ್ಟಿರುವ ದಾರುಣ ಘಟನೆ ನಗರದ ಉಲ್ಲಾಳ ಬಳಿಯ ಮಂಗನಹಳ್ಳಿ ಕ್ರಾಸ್‌ ಸಮೀಪ ನಡೆದಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 24): ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರಸ್ತೆ ಬದಿಯ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದವರಿಗೆ ಬೆಂಕಿ ತಾಕಿದ ಪರಿಣಾಮ ತಂದೆ - ಮಗಳು ಮೃತಪಟ್ಟಿರುವ ದಾರುಣ ಘಟನೆ ನಗರದ ಉಲ್ಲಾಳ ಬಳಿಯ ಮಂಗನಹಳ್ಳಿ ಕ್ರಾಸ್‌ ಸಮೀಪ ನಡೆದಿದೆ.

ಟ್ರಾನ್ಸ್‌ಫಾರ್ಮರ್ ಸ್ಫೋಟಕ್ಕೆ ತಂದೆ-ಮಗಳು ಬಲಿ, ಹಸೆಮಣೆ ಏರಬೇಕಾದ ಯುವತಿ ಮಸಣಕ್ಕೆ

ಮಂಗನಹಳ್ಳಿ ನಿವಾಸಿ ಶಿವರಾಜ್‌(55), ಪುತ್ರಿ ಚೈತನ್ಯ(19) ಮೃತ ದುರ್ದೈವಿ. ನಿಶ್ಚಿತಾರ್ಥಕ್ಕೆ ಕಲ್ಯಾಣ ಮಂಟಪ ಬುಕ್‌ ಮಾಡಿ ಮಗಳ ಜತೆ ಶಿವರಾಜ್‌ ಮನೆಗೆ ಮರಳುವಾಗ ಈ ಘಟನೆ ನಡೆದಿದೆ. ಟ್ರಾನ್ಸ್‌ಫಾರ್ಮರ್ ಕೆಟ್ಟು ಹೋಗಿರುವ ಬಗ್ಗೆ ಸ್ಥಳೀಯರು ಈ ಮೊದಲೇ ಬೆಸ್ಕಾಂಗೆ ದೂರು ನೀಡಿದ್ದರು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈ ನಿರ್ಲಕ್ಷ್ಯಕ್ಕೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. 

Related Video