ಬೆಂಗಳೂರಿನಲ್ಲಿ ಲಾಕ್ಡೌನ್ ವಿಸ್ತರಣೆ ಆಗುತ್ತಾ? ಉಸ್ತುವಾರಿ ಸಚಿವರು ಹೇಳಿದ್ದಿಷ್ಟು..!
ಲಾಕ್ಡೌನ್ ವಿಸ್ತರಣೆ ಮಾಡಬೇಕಾ? ಬೇಡವಾ ಅನ್ನುವುದನ್ನು, ನಿಯಂತ್ರಣವನ್ನು ಹೇಗೆ ಮಾಡಬಹುದು ಎಂಬುದರ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸುತ್ತೇವೆ. ಬೆಂಗಳೂರಿನಲ್ಲಿ ಮತ್ತೆ ಲಾಕ್ಡೌನ್ ಮಾಡುವುದಿಲ್ಲ ಎಂದು ಉಸ್ತುವಾರಿ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಬೆಂಗಳೂರು (ಜು. 20): ಲಾಕ್ಡೌನ್ ವಿಸ್ತರಣೆ ಮಾಡಬೇಕಾ? ಬೇಡವಾ ಅನ್ನುವುದನ್ನು, ನಿಯಂತ್ರಣವನ್ನು ಹೇಗೆ ಮಾಡಬಹುದು ಎಂಬುದರ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸುತ್ತೇವೆ. ಬೆಂಗಳೂರಿನಲ್ಲಿ ಮತ್ತೆ ಲಾಕ್ಡೌನ್ ಮಾಡುವುದಿಲ್ಲ ಎಂದು ಉಸ್ತುವಾರಿ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಇಂದು ಸಿಎಂ ಯಡಿಯೂರಪ್ಪ ಟಾಸ್ಕ್ ಫೋರ್ಸ್ ಹಾಗೂ ಬೆಂಗಳೂರು ಸಚಿವರ ಜೊತೆ ಸಭೆ ನಡೆಸಿದ್ದಾರೆ. ಆರ್. ಅಶೋಕ್ ಸುವರ್ಣ ನ್ಯೂಸ್ ಜೊತೆ ಮಾತನಾಡಿ, ಲಾಕ್ಡೌನ್ ಎಲ್ಲದಕ್ಕೂ ಪರಿಹಾರ ಅಲ್ಲ. ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ. ಈಗ ತಾನೆ ರಾಜ್ಯದ ಆರ್ಥಿಕತೆ ಸುಧಾರಿಸಿಕೊಳ್ಳುತ್ತಿದೆ. ಹಾಗಾಗಿ ಮತ್ತೆ ಲಾಕ್ಡೌನ್ ಹೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗ್ಳೂರು ಕೊರೊನಾ ಹಾಟ್ಸ್ಪಾಟ್; 'ವೈರಲ್ ಲೋಡ್'ನಿಂದ ಸೋಂಕು ಹೆಚ್ಚುವ ಭೀತಿ