ಮಹಾಮಳೆ, ಮಹಾ ಪ್ರವಾಹ, ಮುಳುಗಿತು ಕೃಷ್ಣಾನಗರಿ..!

ಕೃಷ್ಣಾ ನಗರಿ ಉಡುಪಿ ದಾಖಲೆ ಮಳೆಗೆ ಸಾಕ್ಷಿಯಾಗಿದೆ. ಕೃಷ್ಣ ಪರಮಾತ್ಮನಿಗೂ ವರುಣದೇವ ತನ್ನ ಪ್ರತಾಪ ತೋರಿಸಿದ್ದಾನೆ. ಕಳೆದ 3 ದಿನಗಳಿಂದ ಎಡೆಬಿಡದೇ ಸುರಿದ ಭಾರೀ ಮಳೆಗೆ ಜನ ಸುಸ್ತಾಗಿ ಹೋಗಿದ್ದಾರೆ. ನಗರವಾಸಿಗಳು ತಮ್ಮ ಮನೆಗಳನ್ನು ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಧಾವಿಸಿದ್ದರು. ಸ್ವರ್ಣಾ ನದಿ ತನ್ನ ದಿಕ್ಕನ್ನೇ ಬದಲಾಯಿಸಿದ್ದಳು. 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ. 22): ಕೃಷ್ಣಾ ನಗರಿ ಉಡುಪಿ ದಾಖಲೆ ಮಳೆಗೆ ಸಾಕ್ಷಿಯಾಗಿದೆ. ಕೃಷ್ಣ ಪರಮಾತ್ಮನಿಗೂ ವರುಣದೇವ ತನ್ನ ಪ್ರತಾಪ ತೋರಿಸಿದ್ದಾನೆ. ಕಳೆದ 3 ದಿನಗಳಿಂದ ಎಡೆಬಿಡದೇ ಸುರಿದ ಭಾರೀ ಮಳೆಗೆ ಜನ ಸುಸ್ತಾಗಿ ಹೋಗಿದ್ದಾರೆ. ನಗರವಾಸಿಗಳು ತಮ್ಮ ಮನೆಗಳನ್ನು ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಧಾವಿಸಿದ್ದರು. ಸ್ವರ್ಣಾ ನದಿ ತನ್ನ ದಿಕ್ಕನ್ನೇ ಬದಲಾಯಿಸಿದ್ದಳು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯಾದ್ಯಂತ ಧಾರಾಕಾರ ಮಳೆ; ವರುಣನ ಆರ್ಭಟಕ್ಕೆ ಜನ ಹೈರಾಣ..!

ಮಳೆಯ ಅಬ್ಬರಕ್ಕೆ ಉಡುಪಿಯ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿತ್ತು. ಮನೆಯಿಂದ ಯಾರೂ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿತ್ತು. ಕೃಷ್ಣ ಮಠ ಸಂಪೂರ್ಣವಾಗಿ ಜಲಾವೃತಗೊಂಡಿತ್ತು. ರಥಬೀದಿಯಲ್ಲಿ ವಾಹನಗಳು ನೀರಿನಲ್ಲಿ ತೇಲಾಡುತ್ತಿತ್ತು. ಇವೆಲ್ಲವನ್ನು ದೃಶ್ಯಗಳಲ್ಲಿ ನೋಡೋಣ ಬನ್ನಿ..!

Related Video