ನಾಳೆ ದರ್ಶನ್ ಹಾಗೂ ಗ್ಯಾಂಗ್ ಕೋರ್ಟ್‌ಗೆ ಹಾಜರು, ಆರೋಪಿಗಳಿಗೆ ಶುರುವಾಯ್ತು ಢವಢವ!

ಪ್ರಸನ್ನ ಕುಮಾರ್ ಕೇಸ್ ಕೈಗೆತ್ತಿಕೊಂಡರೇ ಆರೋಪಿಗಳು ಬಚಾವ್ ಚಾನ್ಸ್ ಇಲ್ವೇ ಇಲ್ಲ, ನಾಳೆ ದರ್ಶನ್ ಗ್ಯಾಂಗ್ ಕೋರ್ಟ್‌ಗೆ ಹಾಜರು, ನಟ ದರ್ಶನ್ ಬಚಾವ್ ಮಾಡಲು ನಡೆಸಿದ ಪ್ರಯತ್ನಗಳೇನು? ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

Share this Video
  • FB
  • Linkdin
  • Whatsapp

ನಟ ದರ್ಶನ್ ಹಾಗೂ ಗ್ಯಾಂಗ್ ನಡೆಸಿದ ಕೊಲೆ ಪ್ರಕರಣ ತನಿಖೆಯಲ್ಲಿ ಹಲವು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿದೆ. ಒಂದು ಬಾರಿ ಕಸ್ಟಡಿ ವಿಸ್ತರಣೆ ಮಾಡಿ ತನಿಖೆ ನಡೆಸಿರುವ ಪೊಲೀಸರು ನಾಳೆ ದರ್ಶನ್ ಸೇರಿ ಇತರರನ್ನು ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. ಈಗಾಗಲೇ ಘಟನೆ ಕುರಿತು ದರ್ಶನ್ ಘಟನೆ ಕುರಿತು ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು 100ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬೆಳವಣಿಗೆ ನಡುವೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಬದಲಾವಣೆ ಒತ್ತಡಗಳು ಕೇಳಿಬಂದಿರುವ ಮಾಹಿತಿಯೂ ಬಯಲಾಗಿದೆ.

Related Video