
Farm Laws: ಚುನಾವಣಾ ಎಫೆಕ್ಟ್, ಕೃಷಿಕಾಯ್ದೆ ವಾಪಸ್, ಅಚ್ಚರಿ ಮೂಡಿಸಿದ ಕೇಂದ್ರದ ನಿರ್ಧಾರ
ರೈತರ ನಿರಂತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ, 3 ವಿವಾದಿತ ಕೃಷಿಕಾಯ್ದೆಯನ್ನು ವಾಪಸ್ ಪಡೆದಿದೆ. ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಮಸೂದೆ ವಾಪಸ್ ಪಡೆಯುವುದಾಗಿ ಹೇಳಿದ್ದಾರೆ.
ಬೆಂಗಳೂರು (ನ. 19): ರೈತರ ನಿರಂತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ, 3 ವಿವಾದಿತ ಕೃಷಿಕಾಯ್ದೆಯನ್ನು ವಾಪಸ್ (Farm Laws) ಪಡೆದಿದೆ. ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಮಸೂದೆ ವಾಪಸ್ ಪಡೆಯುವುದಾಗಿ ಹೇಳಿದ್ದಾರೆ. ರೈತ ಹೋರಾಟಗಾರರನ್ನು ಮನೆಗೆ ತೆರಳುವಂತೆ ಪ್ರಧಾನಿ ಮೋದಿ (PM Modi) ಮನವಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರ ಅಚ್ಚರಿ ಮೂಡಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Modi Withdraws Farm Bills ವಿವಾದಿತ ಕೃಷಿ ಕಾಯ್ದೆ ಪ್ರಧಾನಿ ಮೋದಿ ಹಿಂಪಡೆಯಲು ಕಾರಣವೇನು.?
'ಉತ್ತರ ಪ್ರದೇಶ ಚುನಾವಣೆ, ಪಂಜಾಬ್ ಚುನಾವಣಾ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಕಾಣಿಸುತ್ತದೆ. ಚುನಾವಣಾ ಸಂದರ್ಭದಲ್ಲಿ ಮೋದಿಯೂ ಕೂಡಾ ಮಣಿಯುತ್ತಾರೆ ಎಂಬ ಸಂದೇಶ ನೀಡಿದ್ದಾರೆ. ಈ ಮಸೂದೆ ವಾಪಸ್ನಿಂದ ರೈತರಿಗೆ ನಿಜಕ್ಕೂ ಅನುಕೂಲವಾಗಲಿದಾ ಎಂಬುದು ಚರ್ಚಾಸ್ಪದ ವಿಷಯ' ಎಂದು ಏಷ್ಯಾನೆಟ್ ಸುವರ್ಣನ್ಯೂಸ್ ಸಂಪಾದಕರಾದ ಅಜಿತ್ ಹನಮಕ್ಕನವರ್ ವಿಶ್ಲೇಷಿಸಿದ್ದಾರೆ.