
ನಾಳೆ ಅರಮನೆ ಮೈದಾನದಲ್ಲಿ ಪಂಚಮಸಾಲಿ ಸಮಾವೇಶ: ಬೇಡಿಕೆ ಈಡೇರದಿದ್ರೆ ಸತ್ಯಾಗ್ರಹದ ಎಚ್ಚರಿಕೆ
ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗಾಗಿ ಆಗ್ರಹಿಸಿ ನಾಳೆ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
ಬೆಂಗಳೂರು (ಫೆ. 20): ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗಾಗಿ ಆಗ್ರಹಿಸಿ ನಾಳೆ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
Add Asianetnews Kannada as a Preferred Source

ಸಮಾವೇಶ ಮುಗಿಯುವ ಮುನ್ನ ರಾಜ್ಯ ಸರ್ಕಾರ 2ಎ ಮೀಸಲಾತಿ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಸಮಾವೇಶದ ಸ್ಥಳದಿಂದ ವಿಧಾನಸೌಧದವರೆಗೆ ಪಾದಯಾತ್ರೆಯಲ್ಲಿ ತೆರಳಿ ಧರಣಿ ಸತ್ಯಾಗ್ರಹ ಆರಂಭಿಸಲು ನಿರ್ಧರಿಸಲಾಗಿದೆ. ಮಾರ್ಚ್ 5 ರಿಂದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.