Asianet Suvarna News Asianet Suvarna News

'ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ' ಕಾರ್ಯಕ್ರಮಕ್ಕೆ ಚಾಲನೆ; ಗ್ರಾಮೀಣ ಜನರ ಸಮಸ್ಯೆಗೆ ಮುಕ್ತಿ

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ' ವಿನೂತನ ಕಾರ್ಯಕ್ರಮಕ್ಕೆ ಕಂದಾಯ ಸಚಿವ ಆರ್ ಅಶೋಕ್ ಚಾಲನೆ ನೀಡಿದ್ದಾರೆ.

ಬೆಂಗಳೂರು (ಫೆ. 20): ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ' ವಿನೂತನ ಕಾರ್ಯಕ್ರಮಕ್ಕೆ ಕಂದಾಯ ಸಚಿವ ಆರ್ ಅಶೋಕ್ ಚಾಲನೆ ನೀಡಿದ್ದಾರೆ. ಪಿಂಚಣಿ ಸೇರಿದಂತೆ ಕಂದಾಯ ಇಲಾಖೆಯ ವ್ಯಾಪ್ತಿಗೆ ಸಂಬಂಧಿಸಿದ ಗ್ರಾಮೀಣ ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

BIG 3 Hero:ಗ್ರಾಮದಲ್ಲಿ ಹೊಸ ಬಸ್‌ ಸ್ಟ್ಯಾಂಡ್ ನಿರ್ಮಿಸಿ, ಮಾದರಿಯಾದ ಸಂಜೀವಿನಿ ಯುವ ಬ್ರಿಗೇಡ್

ಕಂದಾಯ ಸಚಿವರು ಸೇರಿದಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಿಗದಿಪಡಿಸಿರುವ ಗ್ರಾಮಗಳಲ್ಲಿ ಜನರ ಸಮಸ್ಯೆ ಆಲಿಸಿ ಪರಿಹರಿಸಿ ರಾತ್ರಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.  ರಾಜ್ಯದ 227 ಗ್ರಾಮ ಪಂಚಾಯಿತಿಗಳಲ್ಲಿ ಕ್ಲರ್ಕ್ಗಳನ್ನು ಹೊರತುಪಡಿಸಿ ಎಲ್ಲಾ ಹಂತದ ಅಧಿಕಾರಿಗಳು ಗ್ರಾಮಗಳಿಗೆ ತೆರಳಲಿದ್ದಾರೆ. ಜಿಲ್ಲಾಧಿಕಾರಿಗಳು, ತಹಶೀಲ್ದಾರ್‌ಗಳು ಸೇರಿದಂತೆ ಇತರೆ ಅಧಿಕಾರಿಗಳು ಗ್ರಾಮಗಳಲ್ಲಿ ದಿನವಿಡಿ ಅಲ್ಲಿಯೇ ಇದ್ದು ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲಿದ್ದಾರೆ.

Video Top Stories