
ಅನ್ಲಾಕ್ ಎಫೆಕ್ಟ್, ಬೆಂಗಳೂರಿಗೆ ಜನರ ವಲಸೆ, ರೈಲ್ವೇ ನಿಲ್ದಾಣದಲ್ಲಿ ಜನದಟ್ಟಣೆ
- ಇಂದಿನಿಂದ 19 ಜಿಲ್ಲೆ ಇಂದು ಅನ್ಲಾಕ್- ಬೆಂಗಳೂರಿಗೆ ಭಾರೀ ಸಂಖ್ಯೆಯಲ್ಲಿ ಕಾರ್ಮಿಕರು ಹಾಗೂ ಉದ್ಯೋಗಿಗಳು ವಾಪಸ್- ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ
ಬೆಂಗಳೂರು (ಜೂ. 14): ಇಂದಿನಿಂದ ಬೆಂಗಳೂರು ಅನ್ಲಾಕ್ ಆಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳಿಂದ ಭಾರೀ ಸಂಖ್ಯೆಯಲ್ಲಿ ಕಾರ್ಮಿಕರು ಹಾಗೂ ಉದ್ಯೋಗಿಗಳು ರಾಜಧಾನಿಗೆ ಹಿಂತಿರುಗಿದರು. ಬೆಳ್ಳಂಬೆಳಗ್ಗೆ ಕಾರ್ಮಿಕರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದರು. ಇದರಿಂದ ಹೊರವಲಯದ ಹೆದ್ದಾರಿಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಿದೆ.
Add Asianetnews Kannada as a Preferred Source
