Asianet Suvarna News Asianet Suvarna News

ಈಶ್ವರಪ್ಪ ರಾಜಿನಾಮೆ ಬೇಡ, ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ (Santosh Suicide Case) ಈಶ್ವರಪ್ಪ (KS Eshwarappa)ರಾಜೀನಾಮೆ (Resignation) ನೀಡಬೇಕೆಂಬ ಒತ್ತಡ ಹೆಚ್ಚಾಗಿದೆ. ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ. 

First Published Apr 13, 2022, 3:22 PM IST | Last Updated Apr 13, 2022, 3:22 PM IST

ಬೆಂಗಳೂರು (ಏ. 13): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ (Santosh Suicide Case) ಈಶ್ವರಪ್ಪ (KS Eshwarappa)ರಾಜೀನಾಮೆ (Resignation) ನೀಡಬೇಕೆಂಬ ಒತ್ತಡ ಹೆಚ್ಚಾಗಿದೆ. ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ. ರಾಜ್ಯಪಾಲರನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿವೆ. ಉಡುಪಿ (Udupi) ನಗರ ಪೊಲೀಸ್‌ ಠಾಣೆಯಲ್ಲಿ (Police Station) ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

ಈಶ್ವರಪ್ಪ ರಾಜೀನಾಮೆಯಷ್ಟೆನಾ? ಅರೆಸ್ಟ್ ಆಗ್ತಾರಾ.? ಸಾಧ್ಯತೆಗಳ ಬಗ್ಗೆ ವಕೀಲರ ಮಾತು

ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ಕೊಠಡಿಯಲ್ಲಿ ಪಂಚನಾಮೆ ನಡೆಸಿ, ಮಹತ್ವದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೊಂದು ಕಡೆ ಈಶ್ವರಪ್ಪನವರ ರಾಜೀನಾಮೆ ಬೇಡ ಎಂದು ಶಿವಮೊಗ್ಗ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದಿದ್ದಾರೆ. ಕುರುಬ ಸ್ವಾಮೀಜಿಗಳು ಕೂಡಾ ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ. ಈಶ್ವರಪ್ಪ ಸಾಹೇಬರು ಅಂಥವರಲ್ಲ ಎಂದಿದ್ದಾರೆ.