Asianet Suvarna News Asianet Suvarna News

'ಶಿವಮೊಗ್ಗ ಹುಣಸೋಡು ಸ್ಫೋಟ, ಪುಲ್ವಾಮ ಸ್ಪೋಟಕ್ಕಿಂತ ದೊಡ್ಡದು'

ಶಿವಮೊಗ್ಗದ ಅಕ್ರಮ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಮಹಾದುರಂತವೊಂದು ಸಂಭವಿಸಿದೆ. ಗಣಿ ಪ್ರದೇಶದಲ್ಲಿ ಬಂಡೆಗಳನ್ನು ಸ್ಫೋಟಿಸಲು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಹತ್ತಾರು ಪೆಟ್ಟಿಗೆಯಷ್ಟು ಜಿಲೆಟಿನ್ ಏಕಕಾಲದಲ್ಲಿ ಸ್ಫೋಟಿಸಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. 
 

ಬೆಂಗಳೂರು (ಜ. 22): ಶಿವಮೊಗ್ಗದ ಅಕ್ರಮ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಮಹಾದುರಂತವೊಂದು ಸಂಭವಿಸಿದೆ. ಗಣಿ ಪ್ರದೇಶದಲ್ಲಿ ಬಂಡೆಗಳನ್ನು ಸ್ಫೋಟಿಸಲು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಹತ್ತಾರು ಪೆಟ್ಟಿಗೆಯಷ್ಟು ಜಿಲೆಟಿನ್ ಏಕಕಾಲದಲ್ಲಿ ಸ್ಫೋಟಿಸಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. 

ಹುಣಸೋಡು ಮಹಾದುರಂತ, ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

ಈ ದುರಂತದ ಬಗ್ಗೆ ಭೂಗರ್ಭ ತಜ್ಞರಾದ HSM ಪ್ರಕಾಶ್ ಅವರು ಮಾತನಾಡಿದ್ದಾರೆ. ನಿನ್ನೆ ರಾತ್ರಿ ಘಟನೆ ನಡೆದಾಗ, ಎಲ್ಲರೂ ಭೂಕಂಪ ಅಂತ ಭಾವಿಸಿದ್ದರು. ಆದರೆ ನಾನು ಇದು ಭೂಕಂಪವಲ್ಲ ಎಂದಿದ್ದೆ. ಆ ನಂತರ ಸ್ಫೋಟಗೊಂಡಿದ್ದು ಬೆಳಕಿಗೆ ಬಂದಿದೆ. ಇದು ಪುಲ್ವಾಮಾಗಿಂತ ದೊಡ್ಡ ಬ್ಲಾಸ್ಟ್. ಒಂದು ವೇಳೆ ಜನಸಂದಣಿಯಿರುವ ಪ್ರದೇಶದಲ್ಲಿ ನಡೆದಿದ್ರೆ, ಇನ್ನೂ ದೊಡ್ಡ ದುರಂತವಾಗುತ್ತಿತ್ತು' ಎಂದಿದ್ದಾರೆ. 
 

Video Top Stories