Asianet Suvarna News Asianet Suvarna News

'ಸಿದ್ದರಾಮಯ್ಯನಂತ 'ಮನೆಮುರುಕರು' ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಅಂದ್ಕೊಂಡಿದ್ದಾರೆ'

ಜನರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆಯಾದ ಪ್ರಧಾನ ಸೇವಕ ಅಲಂಕರಿಸಿರುವ ಪ್ರಧಾನಿ ಹುದ್ದೆಯ ಕುರಿತು ಕೀಳು ಮಟ್ಟದಲ್ಲಿ ಮಾತನಾಡಿ ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ: ಬಿಜೆಪಿ 

ಬೆಂಗಳೂರು (ಅ. 17): ಪ್ರಧಾನಿ ವಿರುದ್ಧ ಏಕವಚನದಲ್ಲಿ ಕಿಡಿ ಕಾರಿದ್ದ ಸಿದ್ದರಾಮಯ್ಯಗೆ  (Siddaramaiah) ಬಿಜೆಪಿ ಪ್ರತ್ಯುತ್ತರ ನೀಡಿದೆ. 

ಗಾಂಧೀಜಿಯನ್ನು ಉಲ್ಲೇಖಿಸಿ, ಎಚ್ಡಿಕೆಗೆ ಸಿದ್ದರಾಮಯ್ಯ ಟಾಂಗ್

' ಜನರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆಯಾದ ಪ್ರಧಾನ ಸೇವಕ ಅಲಂಕರಿಸಿರುವ ಪ್ರಧಾನಿ ಹುದ್ದೆಯ ಕುರಿತು ಕೀಳು ಮಟ್ಟದಲ್ಲಿ ಮಾತನಾಡಿ ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ. ಮಾತೆತ್ತಿದರೆ ನಾನು ಹಳ್ಳಿಯವನು, ನಾನು ಮಾತನಾಡುವ ಶೈಲಿ ಹೀಗೆ ಎನ್ನುವ ನಿಮಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ. ಅನ್ಯರನ್ನು ಪ್ರೀತಿ, ಬಹುವಚನ, ಆದರದಿಂದ ಮಾತನಾಡುವುದು ಗ್ರಾಮೀಣ ಸಂಸ್ಕೃತಿ. ಆದರೆ ನಿಮ್ಮಂಥ 'ಮನೆಮುರುಕರು' ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಎಂದುಕೊಂಡಿದ್ದಾರೆ' ಎಂದಿದೆ ಬಿಜೆಪಿ.