Asianet Suvarna News Asianet Suvarna News

ಬಂಧನ ಭೀತಿ: ನಿರೀಕ್ಷಣಾ ಜಾಮೀನು ಮೊರೆ ಹೋದ ಸ್ನೇಹಿತ್ ಜಗದೀಶ್

ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ ಪ್ರಕರಣ ನಡೆದು 4 ದಿನಗಳಾದರೂ ಆರೋಪಿಗಳ ಬಂಧನವಾಗಿಲ್ಲ. ಸ್ನೇಹಿತ್ ಬಂಧಿಸದಂತೆ ಪ್ರಭಾವಿಗಳು ಪೊಲೀಸರ ಮೇಲೆ ಒತ್ತಡ ಹಾಕುತ್ತಿದ್ಧಾರೆ ಎನ್ನಲಾಗಿತ್ತು. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು.

ಬೆಂಗಳೂರು (ಅ. 26): ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ ಪ್ರಕರಣ ನಡೆದು 4 ದಿನಗಳಾದರೂ ಆರೋಪಿಗಳ ಬಂಧನವಾಗಿಲ್ಲ. ಸ್ನೇಹಿತ್ ಬಂಧಿಸದಂತೆ ಪ್ರಭಾವಿಗಳು ಪೊಲೀಸರ ಮೇಲೆ ಒತ್ತಡ ಹಾಕುತ್ತಿದ್ಧಾರೆ ಎನ್ನಲಾಗಿತ್ತು.

ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ ಕೇಸ್: ಪೊಲೀಸರಿಗೆ ಕಮಿಷನರ್ ಖಡಕ್ ಸೂಚನೆ

ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಕೂಡಲೇ ಕ್ರಮ ಕೈಗೊಳ್ಳಿ ಎಂದು ಕಮಿಷನರ್ ಕಮಲ್ ಪಂಥ್ ಆದೇಶಿಸಿದ್ದರು. ಇದೀಗ ಪೊಲೀಸರು ಅಲರ್ಟ್ ಆಗಿದ್ದು ತನಿಖೆ ಚುರುಕುಗೊಂಡಿದೆ. ಬಂಧನ ಭೀತಿ ಹೆಚ್ಚಾಗುತ್ತಿದ್ದಂತೆ ಸ್ನೇಹಿತ್ ನಿರೀಕ್ಷಣಾ ಜಾಮೀನಿಗೆ ಮುಂದಾಗಿದ್ದಾರೆ. 

Video Top Stories