ಸೂರ್ಯಗ್ರಹಣ: ಬೆಂಗಳೂರು ಬನಶಂಕರಿ ದೇಗುಲದಲ್ಲಿ ಭಕ್ತರಿಂದ ವಿಶೇಷ ಸೇವೆಗೆ ಅವಕಾಶವಿಲ್ಲ

ನಾಳೆ ಈ ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದೆ. ರಾಹುಗ್ರಸ್ತ ಸೂರ್ಯ ಗ್ರಹಣ ಇದಾಗಿದ್ದು, ರಾಜ್ಯದ ಬಹುತೇಕ ದೇವಾಲಯಗಳಲ್ಲಿ ಗ್ರಹಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿಯೂ ಸಿದ್ಧತೆ ಮಾಡಲಾಗಿದ್ದು, ಶನಿವಾರ ಸಂಜೆ ಪೂಜೆ ಬಳಿಕ ಬಂದ್ ಮಾಡಲಾಗುತ್ತದೆ. ಭಾನುವಾರ ಬೆಳಿಗ್ಗೆ ಭಕ್ತಾದಿಗಳಿಗೆ ದರ್ಶನದ ವ್ಯವಸ್ಥೆ ಇರುವುದಿಲ್ಲ. ಗ್ರಹಣ ಬಿಟ್ಟ ನಂತರ ದೇವಸ್ಥಾನವನ್ನು ಶುಚಿಗೊಳಿಸಿ ನಂತರ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ. ಭಕ್ತರಿಂದ ಯಾವುದೇ ಸೇವೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 20): ಈ ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದೆ. ರಾಹುಗ್ರಸ್ತ ಸೂರ್ಯ ಗ್ರಹಣ ಇದಾಗಿದ್ದು, ರಾಜ್ಯದ ಬಹುತೇಕ ದೇವಾಲಯಗಳಲ್ಲಿ ಗ್ರಹಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿಯೂ ಸಿದ್ಧತೆ ಮಾಡಲಾಗಿದ್ದು, ಶನಿವಾರ ಸಂಜೆ ಪೂಜೆ ಬಳಿಕ ಬಂದ್ ಮಾಡಲಾಗುತ್ತದೆ. ಭಾನುವಾರ ಬೆಳಿಗ್ಗೆ ಭಕ್ತಾದಿಗಳಿಗೆ ದರ್ಶನದ ವ್ಯವಸ್ಥೆ ಇರುವುದಿಲ್ಲ. ಗ್ರಹಣ ಬಿಟ್ಟ ನಂತರ ದೇವಸ್ಥಾನವನ್ನು ಶುಚಿಗೊಳಿಸಿ ನಂತರ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ. ಭಕ್ತರಿಂದ ಯಾವುದೇ ಸೇವೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ. 

ಸೂರ್ಯ ಗ್ರಹಣ 2020: ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Related Video