ಖಾಯಂ ಕೆಲಸ ಕೊಡಿಸಿದ ಮಾಜಿ ಸಿಎಂಗೆ ಕೃತಜ್ಞತೆ ಸಲ್ಲಿಸಿದ ವಿಶೇಷ ಚೇತನರು!
ಇಂಧನ ಇಲಾಖೆಯಲ್ಲಿ 600ಕ್ಕೂ ಹೆಚ್ಚು ವಿಶೇಷ ಚೇತನರಿಗೆ ಖಾಯಂ ಉದ್ಯೋಗ ಕೊಡಿಸಿ 2 ವರ್ಷವಾದ ಹಿನ್ನೆಲೆಯಲ್ಲಿ, ವಿಶೇಷ ಚೇತನರು ತಮ್ಮ ಕೃತಜ್ಞತೆ ತಿಳಿಸಲು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಎಳ್ಳು ಬೆಲ್ಲವನ್ನು ಹಂಚಿ, ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಕೋರಿದರು.
ಬೆಂಗಳೂರು(ಜ.14): ಇಂಧನ ಇಲಾಖೆಯಲ್ಲಿ 600ಕ್ಕೂ ಹೆಚ್ಚು ವಿಶೇಷ ಚೇತನರಿಗೆ ಖಾಯಂ ಉದ್ಯೋಗ ಕೊಡಿಸಿ 2 ವರ್ಷವಾದ ಹಿನ್ನೆಲೆಯಲ್ಲಿ, ವಿಶೇಷ ಚೇತನರು ತಮ್ಮ ಕೃತಜ್ಞತೆ ತಿಳಿಸಲು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಎಳ್ಳು ಬೆಲ್ಲವನ್ನು ಹಂಚಿ, ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಕೋರಿದರು.