Asianet Suvarna News Asianet Suvarna News

ಕ್ವಾರಂಟೈನ್‌ನಲ್ಲಿರುವ ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಸೂಚನೆ

ರಾಜ್ಯದ ಐವರು ಸಚಿವರಿಗೆ ಕೊರೋನಾ ವೈರಸ್ ಭೀತಿ ಎದುರಾಗಿದ್ದು, ಸದ್ಯ ಕ್ವಾರಂಟೈನ್‌ನಲ್ಲಿದ್ದಾರೆ. ಈ ಪೈಕಿ ನಾಲ್ವರ ರಿಪೋರ್ಟ್ ನೆಗೆಟಿವ್ ಬಂದಿದ್ದು, ಇನ್ನೊಬ್ಬ ಸಚಿವ ರಿಪೋರ್ಟ್ ಬರಬೇಕಾಗಿದೆ. ಲಾಕ್‌ಡೌನ್ ಬಗ್ಗೆ ಚರ್ಚೆ ನಡೆಸಲು ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಇದೀಗ ಈ 5 ಸಚಿವರಿಗೆ ನೀವು ಮನೆಯಲ್ಲೇ ಇರಿ, ಸಂಪುಟ ಸಭೆಗೆ ಬರಬೇಡಿ ಎಂದು ಸೂಚನೆ ನೀಡಿದ್ದಾರೆ.

ಬೆಂಗಳೂರು(ಏ.30): ಕೊರೋನಾ ವೈರಸ್ ಭೀತಿ ಎದುರಿಸುತ್ತಿರುವ ಸಚಿವರಿಗೆ ಸಚಿವ ಸಂಪುಟ ಸಭೆಗೆ ಬರಬೇಡಿ, ಮನೆಯಲ್ಲೇ ಇರಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಡಕ್ ಸೂಚನೆಯನ್ನು ನೀಡಿದ್ದಾರೆ. 

ರಾಜ್ಯದ ಐವರು ಸಚಿವರಿಗೆ ಕೊರೋನಾ ವೈರಸ್ ಭೀತಿ ಎದುರಾಗಿದ್ದು, ಸದ್ಯ ಕ್ವಾರಂಟೈನ್‌ನಲ್ಲಿದ್ದಾರೆ. ಈ ಪೈಕಿ ನಾಲ್ವರ ರಿಪೋರ್ಟ್ ನೆಗೆಟಿವ್ ಬಂದಿದ್ದು, ಇನ್ನೊಬ್ಬ ಸಚಿವ ರಿಪೋರ್ಟ್ ಬರಬೇಕಾಗಿದೆ. ಲಾಕ್‌ಡೌನ್ ಬಗ್ಗೆ ಚರ್ಚೆ ನಡೆಸಲು ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಸಚಿವ ಸಂಪುಟ ಸಭೆ ಕರೆದ ಮುಖ್ಯಮಂತ್ರಿ ಯಡಿಯೂರಪ್ಪ

ಕ್ವಾರಂಟೈನ್‌ನಲ್ಲಿರುವ ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಖುದ್ದು ಕರೆ ಮಾಡಿ ಸಚಿವ ಸಂಪುಟಕ್ಕೆ ಬರಬೇಡಿ ಎಂದು ಸೂಚನೆ ನೀಡಿದ್ದಾರೆ. ಯಾರಿಗೆಲ್ಲಾ ಸಿಎಂ ಕರೆಮಾಡಿದರು ಎನ್ನುವುದರ ಕಂಪ್ಲಿಟ್ ಡೀಟೈಲ್ಸ್ ಇಲ್ಲಿದೆ ನೋಡಿ.


 

Video Top Stories