ಧರ್ಮಸ್ಥಳಕ್ಕೆ ಭೂತನಾದ ಧೂತ ಸಮೀರ? ಸುಜಾತಾ ಭಟ್ ಮುಂದಿಟ್ಟು, ವಾಸಂತಿ ಫೋಟೋಗೆ ಅನನ್ಯಾ ಎಂದು ಚುಕ್ಕಿ ಇಟ್ಟ!

ಧರ್ಮಸ್ಥಳದಲ್ಲಿ ಕಾಣೆಯಾದಳೆಂದು ಹೇಳಲಾದ 'ಅನನ್ಯಾ'ಳ ಫೋಟೋ, ವಾಸ್ತವದಲ್ಲಿ 2007ರಲ್ಲಿ ಮೃತಪಟ್ಟ ವ್ಯಕ್ತಿಯದ್ದಾಗಿದೆ. ಯೂಟ್ಯೂಬರ್ ಸಮೀರ್ ನೇತೃತ್ವದಲ್ಲಿ ನಡೆದ ಈ ಷಡ್ಯಂತ್ರದಲ್ಲಿ ಸುಜಾತಾ ಭಟ್ ಕೂಡ ಭಾಗಿಯಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಆ.20): ಧರ್ಮಸ್ಥಳದಲ್ಲಿ ನನ್ನ ಮಗಳು 'ಅನನ್ಯಾ ಭಟ್' ಕಾಣೆಯಾಗಿದ್ದಾಳೆ ಹುಡುಕಿಕೊಡಿ ಎಂದು ಕಟ್ಟುಕಥೆ ಹೇಳಿದ ಸುಜಾತಾ ಭಟ್ ಅವರ ಸುಳ್ಳುಗಳ ಸರಣಿ ಬಯಲಾಗಿದೆ. ಧೂತ ಯೂಟ್ಯೂಬರ್‌ ಸಮೀರ್‌ನೊಂದಿಗೆ ಸೇರಿಕೊಂಡು, 'ನಿಗೂಢ ಸಾವು' ಎಂದು ಹೇಳಿ ಒಂದು ನಕಲಿ ಫೋಟೋವನ್ನು ಬಿಡುಗಡೆ ಮಾಡಿರುವುದು ಈ ಪ್ರಕರಣಕ್ಕೆ ಮತ್ತಷ್ಟು ಗಂಭೀರ ತಿರುವು ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುಜಾತಾ ಭಟ್ ಬಿಡುಗಡೆ ಮಾಡಿದ 'ಅನನ್ಯಾ' ಎಂಬ ಫೋಟೋ, ರಂಗಪ್ರಸಾದ್ ಅವರ ಸೊಸೆ ವಾಸಂತಿ ಅವರ ಫೋಟೋ ಎಂದು ಬಯಲಾಗಿದೆ. ವಾಸಂತಿ ಅವರು 2007ರಲ್ಲಿಯೇ ನಿಧನರಾಗಿದ್ದು, ಸಂಬಂಧಿಕರು ಇಲ್ಲದಿರುವ ಈ ಫೋಟೋವನ್ನು ಬಳಸಿಕೊಳ್ಳಲು ಯೂಟ್ಯೂಬರ್ ಸಮೀರ್ ತಂತ್ರ ರೂಪಿಸಿದ್ದ ಎನ್ನಲಾಗಿದೆ.

ಷಡ್ಯಂತ್ರದ ರೂವಾರಿ ಯೂಟ್ಯೂಬರ್ ಸಮೀರ್?
'ಅನನ್ಯಾ' ಎಂಬ ಯುವತಿಯೇ ಇಲ್ಲ ಎಂದು ಸುವರ್ಣ ನ್ಯೂಸ್ ವರದಿ ಮಾಡಿದ ನಂತರ, ಧರ್ಮಸ್ಥಳ ವಿರೋಧಿ ಗ್ಯಾಂಗ್ ವಿಚಲಿತಗೊಂಡಿತ್ತು. ಈ ಹಂತದಲ್ಲಿ, ಫೋಟೋಗಾಗಿ ಇಂಟರ್‌ನೆಟ್‌ನಲ್ಲಿ ಹುಡುಕಾಟ ನಡೆಸಿದ ಗ್ಯಾಂಗ್, ಸುಲಭವಾಗಿ ಸಿಕ್ಕಿಬೀಳುವ ಭಯದಿಂದ ಹಳೆಯ, ಮೃತಪಟ್ಟ ಹುಡುಗಿಯ ಫೋಟೋ ಬಳಸುವ ನಿರ್ಧಾರಕ್ಕೆ ಬಂದಿತು. ಆಗ, ಸುಜಾತಾ ಭಟ್ ಅವರು ರಂಗಪ್ರಸಾದ್ ಅವರ ಸೊಸೆ ವಾಸಂತಿ ಅವರ ಫೋಟೋ ನೀಡಿದ್ದಾರೆ. ಈ ಫೋಟೋ ಸತ್ತ ಮಹಿಳೆಯದಾಗಿರುವುದರಿಂದ ಯಾರೂ ಪತ್ತೆಹಚ್ಚಲು ಸಾಧ್ಯವಿಲ್ಲ ಎಂಬುದು ಈ ಗ್ಯಾಂಗ್‌ನ ಲೆಕ್ಕಾಚಾರವಾಗಿತ್ತು.

Related Video