
ನೇಮಕಾತಿ ಹಗರಣ: ತಾರಕಕ್ಕೇರಿದ ಕಾಂಗ್ರೆಸ್ ಬಿಜೆಪಿ ನಾಯಕರ ವಾಕ್ಸಮರ..!
* ಯಾರೇ ಭಾಗಿಯಾಗಿದ್ರೂ ಯೂನಿಫಾರ್ಮ್ ಬಿಚ್ಚಿಸಿ ಜೈಲಿಗೆ ಹಾಕ್ತೇವೆ
* ಅಧಿಕಾರ ಹಿಡಿಯಲು ಕಾಂಗ್ರೆಸ್ ಆತುರ ಪಡುತ್ತಿದೆ
* ದಾಖಲೆಗಳಿಲ್ಲದೆ ಆರೋಪ ಮಾಡುತ್ತಿದೆ ಅಂತ ಕೈ ನಾಯಕರ ವಿರುದ್ಧ ಕಿಡಿ ಕಾರಿದ ವಿಜಯೇಂದ್ರ
ಬೆಂಗಳೂರು(ಮೇ.05): ಸಚಿವ ಅಶ್ವತ್ಥ್ ನಾರಾಯಣ ಇಲಾಖೆಯಲ್ಲೂ ಅಕ್ರಮ ನಡೆದಿದೆ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗಂಭೀರವಾಗಿ ಆರೋಪಿಸಿದ್ದಾರೆ.
* ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಬಿಜೆಪಿಯಲ್ಲೇ ಷಡ್ಯಂತ್ರ ನಡೆದಿದೆ ಅಂತ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
News Hour ಬೊಮ್ಮಾಯಿ ಸರ್ಕಾರದ ಸರ್ವೇ ರಿಪೋರ್ಟ್, ಹೈಕಮಾಂಡ್ನಿಂದ ಬಂತು ಖಡಕ್ ಸೂಚನೆ!
* ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ರಾಮನಗರಲ್ಲಿ ಅಕ್ರಮ ಅಗಿರುವುದು ಸ್ಪಷ್ಟವಾಗಿದೆ ಅಂತ ಹೇಳಿದ್ದಾರೆ.
* ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಯಾರೇ ಭಾಗಿಯಾಗಿದ್ರೂ ಯೂನಿಫಾರ್ಮ್ ಬಿಚ್ಚಿಸಿ ಜೈಲಿಗೆ ಹಾಕ್ತೇವೆ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಖಡಕ್ ಆಗಿ ವಾರ್ನಿಂಗ್ ಮಾಡಿದ್ದಾರೆ.
* ಅಧಿಕಾರ ಹಿಡಿಯಲು ಕಾಂಗ್ರೆಸ್ ಆತುರ ಪಡುತ್ತಿದೆ. ದಾಖಲೆಗಳಿಲ್ಲದೆ ಆರೋಪಗಳನ್ನ ಮಾಡುತ್ತಿದೆ ಅಂತ ಕೈ ನಾಯಕರ ವಿರುದ್ಧ ಬಿ.ವೈ. ವಿಜಯೇಂದ್ರ ಅವರು ಕಿಡಿ ಕಾರಿದ್ದಾರೆ.