Asianet Suvarna News Asianet Suvarna News

ರಾತ್ರಿ ಕರ್ಫ್ಯೂ ಮತ್ತಷ್ಟು ಕಠಿಣಗೊಳಿಸ್ತಾರಾ CM ಬಿಎಸ್‌ವೈ

ತಜ್ಞರ ವರದಿಯನ್ನು ಆಧರಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ಇದೇ ವೇಳೆ ಅಂತರಾಜ್ಯ ಪ್ರಯಾಣವನ್ನು ಸ್ತಬ್ಧಗೊಳಿಸುವ ಬಗ್ಗೆಯೂ ಸಿಎಂ ಆಲೋಚಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು(ಜೂ.29): ಕೊರೋನಾ ರಣಕೇಕೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೀಗಿರುವಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ(ಜೂ.29)ಲ್ಲಿಂದು ಕೊರೋನಾ ನಿಯಂತ್ರಣದ ಕುರಿತಂತೆ ಟಾಸ್ಕ್ ಫೋರ್ಸ್‌ ಸಭೆ ನಡೆಯಲಿದೆ.

ತಜ್ಞರ ವರದಿಯನ್ನು ಆಧರಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ಇದೇ ವೇಳೆ ಅಂತರಾಜ್ಯ ಪ್ರಯಾಣವನ್ನು ಸ್ತಬ್ಧಗೊಳಿಸುವ ಬಗ್ಗೆಯೂ ಸಿಎಂ ಆಲೋಚಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ದಾವಣಗೆರೆಯಲ್ಲಿ ಮತ್ತೆ 6 ಹೊಸ ಕೊರೋನಾ ಪಾಸಿಟಿವ್‌ ಕೇಸ್‌ ಪತ್ತೆ

ಇನ್ನು ಜಿಲ್ಲಾ ಕೇಂದ್ರಗಳಲ್ಲಿ ತುರ್ತು ಆರೋಗ್ಯ ಸೇವೆ ಒದಗಿಸುವ ಆಂಬುಲೆನ್ಸ್‌ ಸಂಖ್ಯೆಯನ್ನು ಹೆಚ್ಚಿಸುವ ಬಗ್ಗೆಯೂ ಸಿಎಂ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ರಾತ್ರಿ ಕರ್ಫ್ಯೂ ಮತ್ತಷ್ಟು ಕಠಿಣಗೊಳಿಸುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

Video Top Stories