Shivamogga Riots: ವ್ಯಾಪಕ ಹಿಂಸೆ, 2 ದಿನ ನಿಷೇಧಾಜ್ಞೆ ವಿಸ್ತರಣೆ, ಶಾಲಾ-ಕಾಲೇಜುಗಳಿಗೂ ರಜೆ

 ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು ಎರಡು ದಿನ ವಿಸ್ತರಿಸಲಾಗಿದೆ. ಇದೇ ವೇಳೆ, ಸೋಮವಾರ ರಾತ್ರಿ 10ರಿಂದ ಬುಧವಾರ ಬೆಳಗ್ಗೆ 6ರವರೆಗೆ ಕರ್ಫ್ಯೂ ಘೋಷಿಸಲಾಗಿದೆ. ಶಾಲಾ-ಕಾಲೇಜುಗಳಿಗೂ ರಜೆ ಮುಂದುವರಿಸಲಾಗಿದೆ. 

Share this Video
  • FB
  • Linkdin
  • Whatsapp

 ಶಿವಮೊಗ್ಗ (ಫೆ. 22): ಬಜರಂಗದಳ ಕಾರ್ಯಕರ್ತ ಹರ್ಷ ಎಂಬಾತನ ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಇಡೀ ಶಿವಮೊಗ್ಗ ನಗರ ಸೋಮವಾರ ಹೊತ್ತಿ ಉರಿದಿದೆ. ದಿನವಿಡೀ ಉದ್ರಿಕ್ತ ಗುಂಪುಗಳು ಕಂಡ ಕಂಡಲ್ಲಿ ಆಸ್ತಿಪಾಸ್ತಿಗಳ ಮೇಲೆ ಕಲ್ಲು ತೂರಿ, ವಾಹನಗಳು, ಅಂಗಡಿಗಳಿಗೆ ಬೆಂಕಿ ಹಚ್ಚುವ ಮೂಲಕ ಹಿಂಸಾಚಾರಕ್ಕಿಳಿದಿದ್ದು, ಈ ವೇಳೆ 25ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ನಿಷೇಧಾಜ್ಞೆ ನಡುವೆಯೇ ನಡೆದ ಈ ಭಾರೀ ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು ಎರಡು ದಿನ ವಿಸ್ತರಿಸಲಾಗಿದೆ. ಇದೇ ವೇಳೆ, ಸೋಮವಾರ ರಾತ್ರಿ 10ರಿಂದ ಬುಧವಾರ ಬೆಳಗ್ಗೆ 6ರವರೆಗೆ ಕರ್ಫ್ಯೂ ಘೋಷಿಸಲಾಗಿದೆ. ಶಾಲಾ-ಕಾಲೇಜುಗಳಿಗೂ ರಜೆ ಮುಂದುವರಿಸಲಾಗಿದೆ. ಈ ಹಿಂದೆ ಜಿಲ್ಲೆಯಲ್ಲಿ ಕೆಲಸ ಮಾಡಿದ್ದ ಪೊಲೀಸ್‌ ಅಧಿಕಾರಿಗಳು, ಹೆಚ್ಚುವರಿ ಪೊಲೀಸ್‌ ಸಿಬ್ಬಂದಿಯನ್ನು ಕರೆಸಿಕೊಂಡು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶಿವಮೊಗ್ಗ ಹಿಂಸಾಚಾರದ ಬೆನ್ನಲ್ಲೇ ದಕ್ಷಿಣ ಕನ್ನಡ ಸೇರಿ ರಾಜ್ಯದ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.


Related Video