Asianet Suvarna News Asianet Suvarna News

ಮೈಸೂರಿನಲ್ಲಿ ಹೆಚ್ಚಾದ ಪ್ರತಿಭಟನೆ ಕಾವು; 2 ದಿನದಿಂದ ಕೋವಿಡ್ ವರದಿಯನ್ನೇ ಸಲ್ಲಿಸಿಲ್ಲ ಆರೋಗ್ಯ ಇಲಾಖೆ

ಮೈಸೂರಿನಲ್ಲಿ ವೈದ್ಯಾಧಿಕಾರಿ ಡಾ. ನಾಗೇಂದ್ರ ಸಾವಿನ ಪ್ರಕರಣವನ್ನು ಖಂಡಿಸಿ ಕಳೆದೆರಡು ದಿನಗಳಿಂದ ಮೈಸೂರಿನಲ್ಲಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಮೈಸೂರಿನಲ್ಲಿ ವೈದ್ಯಾಧಿಕಾರಿಗಳ ಸಭೆ ನಡೆಯಲಿದ್ದು ಪ್ರತಿಭಟನೆಯ ಮುಂದಿನ ರೂಪುರೇಷೆಗಳ ಬಗ್ಗೆ, ಮುಂದಿನ ಕ್ರಮಗಳ ಬಗ್ಗೆ ತೀರ್ಮಾನವಾಗಲಿದೆ. 

ಮೈಸೂರು (ಆ. 23): ವೈದ್ಯಾಧಿಕಾರಿ ಡಾ. ನಾಗೇಂದ್ರ ಸಾವಿನ ಪ್ರಕರಣವನ್ನು ಖಂಡಿಸಿ ಕಳೆದೆರಡು ದಿನಗಳಿಂದ ಮೈಸೂರಿನಲ್ಲಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಮೈಸೂರಿನಲ್ಲಿ ವೈದ್ಯಾಧಿಕಾರಿಗಳ ಸಭೆ ನಡೆಯಲಿದ್ದು ಪ್ರತಿಭಟನೆಯ ಮುಂದಿನ ರೂಪುರೇಷೆಗಳ ಬಗ್ಗೆ, ಮುಂದಿನ ಕ್ರಮಗಳ ಬಗ್ಗೆ ತೀರ್ಮಾನವಾಗಲಿದೆ. 

ಕಳೆದ 2 ದಿನಗಳಿಂದ ಆರೋಗ್ಯ ಇಲಾಖೆ ಕೋವಿಡ್ ವರದಿಯನ್ನೇ ಸಲ್ಲಿಸಿಲ್ಲ. ಕೋವಿಡ್ ಟೆಸ್ಟ್, ಚಿಕಿತ್ಸೆ ಕೂಡಾ ಜಿಲ್ಲೆಯಲ್ಲಿ ನಡೆಯುತ್ತಿಲ್ಲ. ವೈದ್ಯರ ಪ್ರತಿಭಟನೆಯಿಂದ ರೋಗಿಗಳು ಪರದಾಡುವಂತಾಗಿದೆ. 

ಡಾ. ನಾಗೇಂದ್ರ ಸಾವಿನ ಪ್ರಕರಣಕ್ಕೆ ಪೊಲಿಟಿಕಲ್ ಟ್ವಿಸ್ಟ್‌; ವೈದ್ಯರ ಹೋರಾಟಕ್ಕೆ 'ಕೈ' ಸಾಥ್?