
ಮೇಕೆದಾಟು ಪಾದಯಾತ್ರೆಗೆ ಇಂದು ಕ್ಲೈಮ್ಯಾಕ್ಸ್: ಬೆಂಗ್ಳೂರಿಗರಿಗೆ ಟ್ರಾಫಿಕ್ ಜಾಮ್ ಬಿಸಿ..!
* ಎರಡು ಹಂತದಲ್ಲಿ ನಡೆದ ಪಾದಯಾತ್ರೆಗೆ ಇಂದು ಕೊನೆಯ ದಿನ
* ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ
* ಬೃಹತ್ ಸಮಾವೇಶದಲ್ಲಿ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ
ಬೆಂಗಳೂರು(ಮಾ.03): ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಇಂದು(ಗುರುವಾರ) ತೆರೆ ಬೀಳಲಿದೆ. ಕಾವೇರಿ ನದಿ ಸಂಗಮದಿಂದ ಬೆಂಗಳೂರಿನ ವರೆಗೆ ನಡೆದ ಎರಡು ಹಂತದಲ್ಲಿ ನಡೆದ ಪಾದಯಾತ್ರೆಗೆ ಇಂದು ಕೊನೆಯ ದಿನವಾಗಿದೆ. ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ. ಬೃಹತ್ ಸಮಾವೇಶಕ್ಕೆ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಸಾಕ್ಷಿಯಾಗಲಿದ್ದಾರೆ. ಹೀಗಾಗಿ ಇವತ್ತೂ ಕೂಡ ಬೆಂಗಳೂರಿಗರಿಗೆ ಟ್ರಾಫಿಕ್ ಜಾಮ್ ಆಗೋಗು ಪಕ್ಕಾ ಆಗಿದೆ. ಕಾವೇರಿ ಥಿಯೇಟರ್ನಿಂದ ಸ್ಯಾಂಕಿ ಟ್ಯಾಂಕ್, 18ನೇ ಕ್ರಾಸ್ ಮಲ್ಲೇಶ್ವರಂ, ಮಾರ್ಗೋಸಾ ರಸ್ತೆಯ ಮೂಲಕ ಈದ್ಗಾ ಮೈದಾನ ದಾಟಿ ನ್ಯಾಷನಲ್ ಕಾಲೇಜು ಮೈದಾನ ತಲುಪಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಜಯಕರ್ನಾಟಕ ಸಂಘಟನೆಯಿಂದ ಅಭಿನಂದನಾ ಕಾರ್ಯಕ್ರಮ: ಸುವರ್ಣ ನ್ಯೂಸ್ ನಿರೂಪಕಿ ಭಾವನಾಗೆ ಸನ್ಮಾನ