Asianet Suvarna News Asianet Suvarna News

ಸಿಎಂ ಬಿಎಸ್ ಯಡಿಯೂರಪ್ಪಗೆ ತಿರುಗೇಟು ಕೊಟ್ಟ ಕೋಡಿಹಳ್ಳಿ ಚಂದ್ರಶೇಖರ್‌

ಸಿಎಂ ಮಾಧ್ಯಮ ಪ್ರಕಟಣೆಗೆ ಚಂದ್ರಶೇಖರ್​ ತಿರುಗೇಟು ಕೊಟ್ಟಿದ್ದು ಸಾರಿಗೆ ಸಿಬ್ಬಂದಿ ಎತ್ತಿಕಟ್ಟುವುದು ಅಂದ್ರೇನು? ಎಂದು ಸಿಎಂಗೆ ನೇರ ಪ್ರಶ್ನೆ ಹಾಕಿದ್ದಾರೆ.

ಬೆಂಗಳೂರು, (ಡಿ.12): ಸಾರಿಗೆ ನೌಕರರ ಹೋರಾಟದ ಗೌರವಾಧ್ಯಕ್ಷರಾಗಿ ಕೋಡಿಹಳ್ಳಿ ಚಂದ್ರಶೇಖರ್​ರನ್ನು ಆಯ್ಕೆ ಮಾಡಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್‌ರನ್ನ ನೌಕರರು ಆಯ್ಕೆ ಮಾಡಿದ್ದಾರೆ. ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ನೌಕರರು ಕೋಡಿಹಳ್ಳಿ ಚಂದ್ರಶೇಖರ್‌ರನ್ನ ಆಯ್ಕೆ ಮಾಡಿದ್ದಾರೆ.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಿಎಂ ಯಡಿಯೂರಪ್ಪ ಕೆಂಡಾಮಂಡಲ

ಈ ನಡುವೆ, ಸಿಎಂ ಮಾಧ್ಯಮ ಪ್ರಕಟಣೆಗೆ ಚಂದ್ರಶೇಖರ್​ ತಿರುಗೇಟು ಕೊಟ್ಟಿದ್ದು ಸಾರಿಗೆ ಸಿಬ್ಬಂದಿ ಎತ್ತಿಕಟ್ಟುವುದು ಅಂದ್ರೇನು? ಎಂದು ಸಿಎಂಗೆ ನೇರ ಪ್ರಶ್ನೆ ಹಾಕಿದ್ದಾರೆ.