'ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆದಾಗ ಎಚ್ಚೆತ್ತುಕೊಂಡಿದ್ರೆ ಇಂತಹ ಗಲಾಟೆ ಆಗ್ತಾಯಿರಲಿಲ್ಲ'
ಪಾದರಾಯನಪುರ ಗಲಾಟೆ ಸಾರ್ವಜನಿಕ, ರಾಜಕೀಯ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗೂಂಡಾಗಿರಿ ನಡೆಸಿದವರನ್ನು ಬಂಧಿಸಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ. ಶಾಸಕ ಜಮೀರ್ ಅಹ್ಮದ್ ಖಾನ್ ಅಸಡ್ಡೆ ವರ್ತನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ಬಗ್ಗೆ ಮಾಜಿ ಸಚಿವರಾದ ಯು ಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು (ಏ. 20): ಪಾದರಾಯನಪುರ ಗಲಾಟೆ ಸಾರ್ವಜನಿಕ, ರಾಜಕೀಯ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗೂಂಡಾಗಿರಿ ನಡೆಸಿದವರನ್ನು ಬಂಧಿಸಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ. ಶಾಸಕ ಜಮೀರ್ ಅಹ್ಮದ್ ಖಾನ್ ಅಸಡ್ಡೆ ವರ್ತನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ಬಗ್ಗೆ ಮಾಜಿ ಸಚಿವರಾದ ಯು ಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.
ಇದು ಜಮೀರ್ ಖಾನ್ ಸರ್ಕಾರವಲ್ಲ; ತನಿಖೆಯಿಂದ ಎಲ್ಲವೂ ಹೊರ ಬೀಳಲಿದೆ: ಬೊಮ್ಮಾಯಿ
ಇಂತಹ ಅಮಾನವೀಯ ಘಟನೆಯನ್ನು ನಾವು ಖಂಡಿಸುತ್ತೇವೆ. ಇಲ್ಲಿ ಧರ್ಮದ ಪ್ರಶ್ನೆ ಬರುವುದಿಲ್ಲ. ತಪ್ಪು ಯಾರೇ ಮಾಡಿರಲಿ ಅವರಿಗೆ ಶಿಕ್ಷೆಯಾಗಲೇಬೇಕು. ಮುಂದೆ ಇಂತಹ ಕೆಲಸಕ್ಕೆ ಕೈ ಹಾಕುವವರಿಗೆ ಭಯ ಹುಟ್ಟಬೇಕು. ಸರ್ಕಾರದ ಮುಂದೆ ಜವಾಬ್ದಾರಿಯಿದೆ. ಹದಿನೈದು ದಿನಗಳ ಹಿಂದೆ ಆಶಾ ಕಾರ್ಯಕರ್ತೆಯರ ಮೇಲೆ ದಾಳಿಯಾದಾಗ ಎಚ್ಚೆತ್ತುಕೊಂಡಿದ್ದರೆ ಇಂತಹ ಘಟನೆ ಮರುಕಳಿಸುತ್ತಿರಲಿಲ್ಲ' ಎಂದಿದ್ದಾರೆ..