
News Hour: ವಕ್ಫ್ ಬೋರ್ಡ್ಗೆ ಬಿಸಿ ಮುಟ್ಟಿಸಿದ ಹಿಂದೂ ಸಂಘಟನೆಗಳು!
ವಿಜಯಪುರದಲ್ಲಿ 10 ಸಾವಿರ ಎಕರೆ ಭೂಮಿ ತನ್ನದು ಎಂದು ಹೇಳುತ್ತಿರುವ ವಕ್ಫ್ ಬೋರ್ಡ್ ವಿರುದ್ದ ಆಕ್ರೋಶ ಜೋರಾಗಿದೆ. ಮಂಗಳವಾರ ಬಿಜೆಪಿ ಹಾಗೂ ಹಿಂದು ಪರ ಸಂಘಟನೆಗಳು ಈ ಬಗ್ಗೆ ಪ್ರತಿಭಟನೆ ನಡೆಸಿದವು.
ಬೆಂಗಳೂರು (ಅ.15): ವಿಜಯಪುರದಲ್ಲಿ ವಕ್ಫ್ ಸರ್ವೆ ಜಟಾಪಟಿ ಜೋರಾಗಿದೆ. ವಕ್ಫ್ ಸರ್ವೇ ವಿರುದ್ಧ ಬಿಜೆಪಿ ಹಾಗೂ ಹಿಂದು ಸಂಘಟನೆಗಳು ಮುಗಿಬಿದ್ದಿವೆ. ವಿಜಯಪುರದಲ್ಲಿ 10 ಸಾವಿರ ಎಕರೆ ಭೂಮಿ ತನ್ನದು ಎಂದು ವಕ್ಫ್ ಹೇಳುತ್ತಿದೆ.
Add Asianetnews Kannada as a Preferred Source

10 ಸಾವಿರ ಎಕರೆ ತನ್ನ ಭೂಮಿಯಲ್ಲಿ ಅರ್ಧಕ್ಕಿಂತ ಹೆಚ್ಚಿನ ಭೂಮಿ ಒತ್ತುವರಿಯಾಗಿದೆ ಎಂದು ವಕ್ಫ್ ಹೇಳಿತ್ತು. ಈ ಒತ್ತುವರಿ ಜಮೀನನ್ನು ವಾಪಾಸ್ ಪಡೆಯಲು ವಕ್ಫ್ ಸಚಿವ ಜಮೀರ್ ಅಹ್ಮದ್ ಆದೇಶ ನೀಡಿದ್ದರು.
ಜಮೀರ್ ಅಹಮದ್ ಖಾನ್ ಮುತ್ತಜ್ಜನ ಹೆಸರು ಮಲ್ಲಪ್ಪ, ಕಲ್ಲಪ್ಪ ಇರಬಹುದು: ಶಾಸಕ ಯತ್ನಾಳ್!
ಈ ಬಗ್ಗೆ ರೈತರಿಗೆ ನೋಟಿಸ್ ಕೂಡ ನೀಡಲಾಗಿತ್ತು. ಇದು ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಸರ್ವೆ ಆದೇಶ ಹಿಂಪಡೆಯುವಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.