
ವಿದ್ಯುತ್ ದರ ಹೆಚ್ಚಳ ಹಿಂಪಡೆಯಲು ಸಿಎಂ ಜೊತೆ ಚರ್ಚೆ: ಸಚಿವ ಎಂ.ಬಿ. ಪಾಟೀಲ್
ಕೆಇಆರ್ಸಿ ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಆದರೆ, ವಿದ್ಯುತ್ ದರ ಹೆಚ್ಚಳ ನಿರ್ಧಾರ ಹಿಂಪಡೆಯುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ನಮ್ಮ ಸರ್ಕಾರ ವಿದ್ಯುತ್ ದರ ಹೆಚ್ಚಳ ಮಾಡಿಲ್ಲ, ಕಾಂಗ್ರೆಸ್ ಸರ್ಕಾರ ಬರುವ ಮೊದಲೇ ಹೆಚ್ಚಳ ಮಾಡಲಾಗಿದೆ ಎಂದು ವಿಜಯಪುರದಲ್ಲಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಅಲ್ಲದೆ, ಬೆಲೆ ಏರಿಕೆಗೂ ನಮಗೂ ಸಂಬಂಧ ಇಲ್ಲ. ಕೆಇಆರ್ಸಿ ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಆದರೆ, ವಿದ್ಯುತ್ ದರ ಹೆಚ್ಚಳದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಲಾಗುವುದು. ಈ ಬಗ್ಗೆ ಇಂಧನ ಸಚಿವರ ಜತೆ ಮಾತನಾಡುತ್ತೇನೆ ಎಂದೂ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
Add Asianetnews Kannada as a Preferred Source
