Asianet Suvarna News Asianet Suvarna News

ಕೇರಳದಂತಹ ಘಟನೆ ಕರ್ನಾಟಕದಲ್ಲಿ ನಡೆಯದಿರಲಿ: ಸಿಂಎಗೆ ಸಂಸದ ರಾಜೀವ್ ಪತ್ರ

  • ಇತ್ತೀಚೆಗೆ ಕೇರಳದಲ್ಲಿ ಸ್ಫೋಟಕ ತುಂಬಿದ್ದ ಹಣ್ಣು ತಿಂದು ಸತ್ತಿದ್ದ ಗರ್ಭಿಣಿ ಆನೆ 
  • ವನ್ಯಜೀವಿ ರಕ್ಷಣೆ ಆದ್ಯತೆಯಾಗಲಿ: ಸಂಸದ ರಾಜೀವ್ ಚಂದ್ರಶೇಖರ್ ಅಭಿಮತ
  • ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪಗೆ ರಾಜ್ಯಸಭಾ ಸಂಸದರಿಂದ ಪತ್ರ

ಬೆಂಗಳೂರು (ಜೂ. 06): ಇತ್ತೀಚೆಗೆ ಕೇರಳದಲ್ಲಿ ಸ್ಫೋಟಕ ತುಂಬಿದ್ದ ಹಣ್ಣು ತಿಂದು ಗರ್ಭಿಣಿ ಆನೆ ಸತ್ತಿರುವ ಘಟನೆಯನ್ನು ಖಂಡಿಸಿರುವ ಸಂಸದ ರಾಜೀವ್ ಚಂದ್ರಶೇಖರ್, ವನ್ಯಜೀವಿ ಸಂರಕ್ಷಣೆ ಸರ್ಕಾರಗಳ ಆದ್ಯತೆಯಾಗಲಿ ಎಂದು ಹೇಳಿದ್ದಾರೆ.

ಇದನ್ನೂ ನೋಡಿ | ವನ್ಯಜೀವಿಗಳ ವಿರುದ್ಧ ಕ್ರೌರ್ಯ: ಕಾಯ್ದೆ ತಿದ್ದುಪಡಿ, ಕಠಿಣ ಶಿಕ್ಷೆಗೆ ಸಂಸದ ರಾಜೀವ್ ಆಗ್ರಹ...

ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದಿರುವ ರಾಜ್ಯಸಭಾ ಸಂಸದರು, ರಾಜ್ಯದಲ್ಲಿ ಅಂತಹ ಕ್ರೂರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Video Top Stories