
ಟೋಕಿಯೋದಲ್ಲಿ ಬೆಳ್ಳಿ ಗೆದ್ದ IAS ಪುತ್ರ, ಕ್ರಿಕೆಟ್ ಬಿಟ್ಟು ಬ್ಯಾಡ್ಮಿಂಟನ್ ನೆಚ್ಚಿಕೊಂಡ ಕತೆ!
* ಎಸ್ಎಲ್4 ವಿಭಾಗದಲ್ಲಿ ಬೆಳ್ಳಿ ಗೆದ್ದ ಕರ್ನಾಟಕ ಮೂಲದ ಸುಹಾಸ್
* ಟೋಕಿಯೋ ಪ್ಯಾರಾಒಲಿಂಪಿಕ್ಸ್ ಕೂಟದಲ್ಲಿ ಭಾರತದ ಮಿಂಚಿನ ಪ್ರದರ್ಶನ~
* ಪ್ಯಾರಾಲಿಂಪಿಕ್ಸ್ನಲ್ಲಿ ಪದಕ ಮೊದಲ IAS ಅಧಿಕಾರಿ
*ಮಗನ ಸಾಧನೆಗೆ ಕುಟುಂಬದವರ ಸಂತಸ
ನವದೆಹಲಿ(ಸೆ.05): ಬ್ಯಾಡ್ಮಿಂಟನ್ ಎಸ್ಎಲ್4 ವಿಭಾಗದಲ್ಲಿ ಕರ್ನಾಟಕ ಮೂಲದ, ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಜಿಲ್ಲಾಧಿಕಾರಿ ಸುಹಾಸ್ ಯತಿರಾಜ್ ಫೈನಲ್ ಪ್ರವೇಶಿಸಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ಮೂಲಕ ಪ್ಯಾರಾಲಿಂಪಿಕ್ಸ್ ಪದಕ ಗೆದ್ದ ಮೊದಲ ಐಎಎಸ್ ಅಧಿಕಾರಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.
Add Asianetnews Kannada as a Preferred Source

ಚಿನ್ನ ಗೆದ್ದ ಸುಹಾಸ್ ಗೆ ಬಿಎಸ್ವೈ ಅಭಿನಂದನೆ
ಕರ್ನಾಟಕ ಮೂಲದ ಐಎಎಸ್ ಅಧಿಕಾರಿಯಾಗಿರುವ ಸುಹಾಸ್ ವಿಶ್ವದ ನಂಬರ್ ಒನ್ ಆಟಗಾರ ಫ್ರಾನ್ಸ್ನ ಲೂಕಸ್ ಮಜೂರ್ ವಿರುದ್ಧ ವಿಶ್ವದ ನಂಬರ್ 3 ಆಟಗಾರ ಸುಹಾಸ್ 1-2 ಸೆಟ್ಗಳ ಅಂತರದಲ್ಲಿ ಸೋಲುವ ಮೂಲಕ ಬೆಳ್ಳಿಗೆ ಕೊರಳೊಡ್ಡಿದ್ದಾರೆ. ಸುಹಾಸ್ ಅವರ ತಾಯಿ ಸಂತಸ ಹಂಚಿಕೊಂಡಿದ್ದಾರೆ.. ಮಗನಿಗೆ ಕ್ರಿಕೆಟ್ ನಲ್ಲಿ ವಿಶೇಷ ಆಸಕ್ತಿ ಇತ್ತು ನಂತರ ಈ ಕಡೆ ಮುಖ ಮಾಡಿದರು ಎಂದು ಹಳೆಯ ದಿನಗಳನ್ನು ಮೆಲಕು ಹಾಕಿದರು .