Asianet Suvarna News Asianet Suvarna News

ಬಿಗ್‌ಬಾಸ್‌ ಮನೆಯಲ್ಲಿ ವಾಸ್ತು ದೋಷ; ಚೆಕ್‌ ಮಾಡಿಸಿ ಎಂದು ನೆಟ್ಟಿಗರ ಸಲಹೆ

ಬಿಗ್ ಬಾಸ್ ಮನೆಯಲ್ಲಿ ವಾಸ್ತು ಸರಿ ಇಲ್ಲ ಎನ್ನುವ ಮಾತು ಕೇಳಿಬರುತ್ತಿದೆ. ಬಿಗ್ ಬಾಸ್ ಒಟಿಟಿ ಕನ್ನಡ ರಿಯಾಲಿಟಿ ಶೋ ಪ್ರಾರಂಭವಾಗಿ ಎರಡು ವಾರಗಳೇ ಕಳೆದಿದೆ. ಇದೀಗ ವಾಸ್ತು ಸರಿ ಇಲ್ಲ ಎನ್ನುವ ಮಾತು ಕೇಳಿಬರುತ್ತಿದೆ. 

ಬಿಗ್ ಬಾಸ್ ಮನೆಯಲ್ಲಿ ವಾಸ್ತು ಸರಿ ಇಲ್ಲ ಎನ್ನುವ ಮಾತು ಕೇಳಿಬರುತ್ತಿದೆ. ಬಿಗ್ ಬಾಸ್ ಒಟಿಟಿ ಕನ್ನಡ ರಿಯಾಲಿಟಿ ಶೋ ಪ್ರಾರಂಭವಾಗಿ ಎರಡು ವಾರಗಳೇ ಕಳೆದಿದೆ. ಇದೀಗ ವಾಸ್ತು ಸರಿ ಇಲ್ಲ ಎನ್ನುವ ಮಾತು ಕೇಳಿಬರುತ್ತಿದೆ. ಭವಿಷ್ಯ ಹೇಳುವ ಗುರೂಜಿನೆ ಬಿಗ್ ಬಾಸ್ ಮನೆಯೊಳಗೆ ಇದ್ದಾರೆ ಇನ್ನೇನು ವಾಸ್ತು ಅಂತೀರಾ. ಹೀಗಿದ್ರು ಬಿಗ್ ಬಾಸ್ ಮನೆಯ ಸ್ಪರ್ಧಿಗಳು ಕೈ ಕಾಲು ಮುರಿದುಕೊಂಡು ಮನೆಯಿಂದ ಹೊರಗೆ ಬರ್ತಿದ್ದಾರಂತೆ. ಲೋಕೇಶ್ ಅವರು ಕಾಲಿಗೆ ಏಟು ಮಾಡಿಕೊಂಡು ಬಿಗ್ ಬಾಸ್ ಯಿಂದ ಔಟ್ ಆಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಅರ್ಜುನ್ ಕೂಡ ಏಟು ಮಾಡಿಕೊಂಡು ಬಿಗ್ ಬಾಸ್ ಮನೆಯಿಂದ ಹೊರನಡೆದಿದ್ದಾರೆ. ಸೋನು ಶ್ರೀನಿವಾಸ್ ಗೌಡ ಕೂಡ ಪೆಟ್ಡು  ಮಾಡಿಕೊಂಡಿದ್ದಾರಂತೆ. ಹಾಗಾಗಿ ಬಿಗ್ ಬಾಸ್ ಮನೆಯ ವಾಸ್ತು ಸರಿಯಿಲ್ಲ ಎನ್ನುವ ಮಾತು ಕೇಳಿಬರುತ್ತಿದೆ.   

Video Top Stories