ಬೆಂಗಳೂರು ಜಯದೇವ ಆಸ್ಪತ್ರೆಯಲ್ಲಿ ಇರೋ ವ್ಯವಸ್ಥೆ ಮೈಸೂರಲ್ಲೂ ಇದೆ-ಡಾ.ಸಿ.ಎನ್ ಮಂಜುನಾಥ್
ಸಾಮಾನ್ಯವಾಗಿ ರಾಜ್ಯದ ವಿವಿಧೆಡೆಯಿಂದ ಜನರು ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಬರುತ್ತಾರೆ. ಆದರರೆ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಇರೋ ಎಲ್ಲಾ ವ್ಯವಸ್ಥೆ ಮೈಸೂರು, ಕಲಬುರಗಿಯಲ್ಲೂ ಇದೆ. ಚಿಕಿತ್ಸೆಗಾಗಿ ಬೆಂಗಳೂರಿನ ವರೆಗೆ ಬರುವ ಅಗತ್ಯವಿಲ್ಲ ಎಂದು ಡಾ.ಸಿ.ಎನ್ ಮಂಜುನಾಥ್ ಹೇಳಿದ್ದಾರೆ.
ಬೆಂಗಳೂರು ಜಯದೇವ ಆಸ್ಪತ್ರೆಯಲ್ಲಿ ಯಾವೆಲ್ಲಾ ಚಿಕಿತ್ಸೆ ಲಭ್ಯವಿದೆಯೋ ಅದೆಲ್ಲವೋ ಮೈಸೂರಿನ ಆಸ್ಪತ್ರೆಯಲ್ಲಿಯೂ ಇದೆ. ಅವರು ಚಿಕಿತ್ಸೆಗಾಗಿ ಬೆಂಗಳೂರಿಗೆ ಬರುವ ಅಗತ್ಯವಿಲ್ಲ ಎಂದು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದ್ದಾರೆ. ಕಲಬುರಗಿಯಲ್ಲೂ ಎಲ್ಲಾ ರೀತಿಯ ವ್ಯವಸ್ಥೆಯಿದೆ. ಯಾವುದೇ ಸೌಲಭ್ಯದ ಅಥವಾ ತಜ್ಞ ವೈದ್ಯರ ಕೊರತೆಯಿಲ್ಲ. ಬೆಂಗಳೂರಿನ ಆಸ್ಪತ್ರೆಯ ಗುಣಮಟ್ಟವನ್ನೇ ಇತರ ಎಲ್ಲಾ ಆಸ್ಪತ್ರೆಯಲ್ಲಿ ಕಾಪಾಡಿಕೊಳ್ಳಲಾಗುತ್ತಿದೆ. ಕೇಂದ್ರೀಯವಾಗಿ ಎಲ್ಲವನ್ನೂ ಬೆಂಗಳೂರಿನಲ್ಲಿ ಮ್ಯಾನೇಜ್ ಮಾಡಲಾಗುತ್ತಿದೆ ಎಂದವರು ತಿಳಿಸಿದ್ದಾರೆ.
ರೋಗಿಗಳು ತುರ್ತು ಚಿಕಿತ್ಸೆಗೆ ಬಂದಾಗ ಹಣ ನೋಡಲ್ಲ, ಜೀವ ಉಳಿಸೋದು ಮುಖ್ಯ; ಡಾ.ಸಿ.ಎನ್.ಮಂಜುನಾಥ್