ಅಪ್ಪ-ಮಗನಿಗೆ ನಡುರಸ್ತೆಯಲ್ಲೇ ಥಳಿತ: ಪೊಲೀಸರ ರಾಕ್ಷಸೀ ಕೃತ್ಯಕ್ಕೆ ಬೆಚ್ಚಿಬಿದ್ದ ರಾಜಧಾನಿ
ಕಾನೂನನ್ನು ಪಾಲಿಸಬೇಕಾದ ಪೊಲೀಸರೇ ಬೀದಿ ಬದಿ ರೌಡಿಗಳಂತೆ ವರ್ತಿಸಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಪೊಲೀಸರ ರಾಕ್ಷಸೀ ಕೃತ್ಯ ಮೊಬೈಲ್ನಲ್ಲಿ ಸೆರೆಯಾಗಿದ್ದು, ಈಗ ವೈರಲ್ ಆಗಿದೆ. ಪೊಲೀಸರ ಈ ವರ್ತನೆಗೆ ರಾಜಧಾನಿ ಮಂದಿ ಬೆಚ್ಚಿಬಿದ್ದಿದ್ದಾರೆ.
ನವದೆಹಲಿ (ಜೂ.17): ಕಾನೂನನ್ನು ಪಾಲಿಸಬೇಕಾದ ಪೊಲೀಸರೇ ಬೀದಿ ಬದಿ ರೌಡಿಗಳಂತೆ ವರ್ತಿಸಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಪೊಲೀಸರ ರಾಕ್ಷಸೀ ಕೃತ್ಯ ಮೊಬೈಲ್ನಲ್ಲಿ ಸೆರೆಯಾಗಿದ್ದು, ಈಗ ವೈರಲ್ ಆಗಿದೆ. ಪೊಲೀಸರ ಈ ವರ್ತನೆಗೆ ರಾಜಧಾನಿ ಮಂದಿ ಬೆಚ್ಚಿಬಿದ್ದಿದ್ದಾರೆ.
ಪೊಲೀಸ್ ವಾಹನಕ್ಕೆ ಢಿಕ್ಕಿ ಹೊಡೆದ ಎಂಬ ಕಾರಣಕ್ಕೆ ಚಾಲಕ ಹಾಗೂ ಆತನ ಮಗನನ್ನು 12 ಮಂದಿ ಪೊಲೀಸರು ಸೇರಿ ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪ್ರಾಣಿಯಂತೆ ರಸ್ತೆಯಲ್ಲಿ ಎಳೆದುಕೊಂಡು ಹೋಗಿದ್ದಾರೆ. ಪೊಲೀಸರ ಅಮಾನವೀಯ ಕೃತ್ಯ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸಾರ್ವಜನಿಕರು ‘ಕಾನೂನು ಪಾಲಕರ’ ರಾಕ್ಷಸೀ ಕೃತ್ಯಕ್ಕೆ ಬೆಚ್ಚಿಬಿದ್ದಿದ್ದಾರೆ.
ಬೆಂಗಳೂರಿನಲ್ಲೂ ಎರಡು ತಿಂಗಳ ಏನು ತಪ್ಪು ಮಾಡದ ಅಮಾಯಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಆತನ ಕಿಡ್ನಿ ಹಾನಿಯಾಗಲು ಕಾರಣವಾದ ಆರೋಪದ ಮೇಲೆ ಡಿ.ಜೆ.ಹಳ್ಳಿಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಮತ್ತು ಪೇದೆಯೊಬ್ಬನನ್ನು ಅಮಾನತು ಮಾಡಲಾಗಿತ್ತು.