ಜಿಂದಾಲ್ ಭೂಮಿ ವಿವಾದ: ಯಡಿಯೂರಪ್ಪಗೆ ‘20 ಕೋಟಿ ಚೆಕ್’ ನೆನಪಿಸಿದ ಸಿಎಂ
ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮಾತಿ ಚಾಟಿ ಬೀಸಿದರು.
ಬೆಂಗಳೂರು (ಜೂ.17): ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾತಿ ಚಾಟಿ ಬೀಸಿದರು.
ಜಿಂದಾಲ್ ವಿಚಾರದಲ್ಲಿ ಯಡಿಯೂರಪ್ಪ ಚೆಕ್ ಮೂಲಕ ಪಡೆದಿದ್ದ 20 ಕೋಟಿಯನ್ನು ರಿಲೀಸ್ ಮಾಡಿದ್ದು ನಾನೇ ಎಂದು ಎಚ್ಡಿಕೆ ತಿರುಗೇಟು ನೀಡಿದರು. ಬಿಜೆಪಿಯವರು ಸುಖಾಸುಮ್ಮನೆ ಬಾಯಿಚಪಲಕ್ಕೆ ಟೀಕೆ ಮಾಡುತ್ತಿದ್ದಾರೆ ಎಂದು ಸಿಎಂ ಈ ವೇಳೆ ಆಕ್ರೋಶ ವ್ಯಕ್ತಪಡಿಸಿದರು.
IMA ವಂಚನೆ, ಜಿಂದಾಲ್ ಭೂಮಿ, ಬರ ಮತ್ತಿತರ ವಿಷಯಗಳ ಕುರಿತು ಚರ್ಚಿಸೋಣ ಎಂದು ಕರೆದರೂ ಬಿಜೆಪಿಯವರು ಬರ್ತಿಲ್ಲ ಎಂದು ಕುಮಾರಸ್ವಾಮಿ ಟೀಕಿಸಿದರು. ಬಳ್ಳಾರಿ ಜಿಲ್ಲೆಯಲ್ಲಿ ಜಿಂದಾಲ್ ಕಂಪನಿಗೆ ರಾಜ್ಯ ಸರ್ಕಾರ ಅತ್ಯಂತ ಕಡಿಮೆ ಬೆಲೆಗೆ 3667 ಎಕರೆ ಭೂಮಿಯನ್ನು ಮಾರಾಟ ಮಾಡಲು ನಿರ್ಧರಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ವಿರೋಧ ಪಕ್ಷ ಬಿಜೆಪಿಯಷ್ಟೇ ಅಲ್ಲ, ಆಡಳಿತಾರೂಢ ಕಾಂಗ್ರೆಸ್ನ ಕೆಲ ನಾಯಕರೂ ಇದನ್ನು ವಿರೋಧಿಸುತ್ತಿರುವುದು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.