ಜನತಾ ದರ್ಶನಕ್ಕೆ ಕಾದಿದ್ದ ಜನರಿಗೆ ಸಿಎಂ ಕೊಟ್ಟದ್ದು ‘ಕಾಯುವ’ ಭಾಗ್ಯ!
ಜನರ ಅಹವಾಲುಗಳನ್ನು ಸ್ವೀಕರಿಸಲು ಗ್ರಾಮ ವಾಸ್ತ್ಯವ್ಯಕ್ಕೆ ಮುಂದಾಗಿರುವ ಸಿಎಂ ಎಚ್.ಡಿ. ಕುಮಾರಸ್ವಾಮಿ, ಜನತಾ ದರ್ಶನ ಕಾರ್ಯಕ್ರಮವನ್ನೂ ಮುಂದುವರಿಸಿದ್ದಾರೆ. ಸಿಎಂ ತಮ್ಮ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಸೋಮವಾರ ಜನತಾ ದರ್ಶನ ಹಮ್ಮಿಕೊಂಡಿದ್ದು, ಬಂದ ಜನರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು.
ಚನ್ನಪಟ್ಟಣ (ಜೂ. 17): ಜನರ ಅಹವಾಲುಗಳನ್ನು ಸ್ವೀಕರಿಸಲು ಗ್ರಾಮ ವಾಸ್ತ್ಯವ್ಯಕ್ಕೆ ಮುಂದಾಗಿರುವ ಸಿಎಂ ಎಚ್.ಡಿ. ಕುಮಾರಸ್ವಾಮಿ, ಜನತಾ ದರ್ಶನ ಕಾರ್ಯಕ್ರಮವನ್ನೂ ಮುಂದುವರಿಸಿದ್ದಾರೆ. ಸಿಎಂ ತಮ್ಮ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಸೋಮವಾರ ಜನತಾ ದರ್ಶನ ಹಮ್ಮಿಕೊಂಡಿದ್ದು, ಬಂದ ಜನರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು.
ಬೆಳಗ್ಗೆ 9 ಗಂಟೆಗೆ ಆರಂಭವಾಗಬೇಕಾಗಿದ್ದ ಜನತಾ ದರ್ಶನ, ಮಧ್ಯಾಹ್ನ 12 ಗಂಟೆಯಾದರೂ ಶುರುವಾಗಿಲ್ಲ. ಕಾರಣ... ಜನತಾ ದರ್ಶನ ಮಾಡಬೇಕಾಗಿದ್ದ ಸಿಎಂ ಪತ್ತೆನೇ ಇಲ್ಲ!
ಕುಮಾರಸ್ವಾಮಿ ಈ ಹಿಂದೆ ಸಿಎಂ ಆಗಿದ್ದಾಗ ಆರಂಭಿಸಿದ್ದ - ಸರ್ಕಾರವನ್ನು ಜನರ ಬಳಿ ಕೊಂಡೊಯ್ಯುವ ಕಾರ್ಯಕ್ರಮ ‘ಗ್ರಾಮ ವಾಸ್ತವ್ಯ’ವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸಲು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯವನ್ನು ಮತ್ತೆ ಆರಂಭಿಸಲಿದ್ದಾರೆ. ಈ ಬಾರಿ ಅವರು ಯಾರ ಮನೆಯಲ್ಲೂ ಉಳಿದುಕೊಳ್ಳುತ್ತಿಲ್ಲ. ಭೇಟಿ ನೀಡುವ ಊರಿನ ಸರ್ಕಾರಿ ಶಾಲೆಯಲ್ಲೇ ಸಿಎಂ ವಾಸ್ತವ್ಯ ಹೂಡಲಿದ್ದಾರೆ.