ಚೀನಾ ಸೊಕ್ಕು ಮುರಿಯಲು ರೆಡಿಯಾಗಿದೆ ರಕ್ಷಣಾ ವ್ಯೂಹ; ಇನ್ಮೇಲೆ ಅಸಲಿ ಆಟ ಶುರು..!
ವಾಸ್ತವ ಗಡಿ ರೇಖೆ ವಿಚಾರಕ್ಕೆ ಸಂಬಂಧಿಸಿದಂತೆ ಭಾರತದ ಜೊತೆ ಸಂಘರ್ಷಕ್ಕಿಳಿದಿರುವ ಚೀನಾಕ್ಕೆ ಭಾರತ ಕಠಿಣ ಸಂದೇಶ ರವಾನಿಸಿದೆ. ಗಡಿರೇಖೆಯಲ್ಲಿ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳದೆ ಸೇನಾಪಡೆಗಳನ್ನು ನಿಯೋಜಿಸುವ ಮೂಲಕ ಚೀನಾ ಕೇವಲ ಶಾಂತಿಯನ್ನಷ್ಟೇ ಅಲ್ಲದೆ, ಉಭಯ ರಾಷ್ಟ್ರಗಳ ಮಧ್ಯೆಯ ಬಾಂಧವ್ಯವನ್ನು ಸಹ ಕದಡುತ್ತಿದೆ. ಹೀಗಾಗಿ, ಪೂರ್ವ ಲಡಾಖ್ನಲ್ಲಿ ಚೀನಾ ನಡೆಸುತ್ತಿರುವ ಕಾರ್ಯ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸಬೇಕು. ಇಲ್ಲದಿದ್ದರೆ ಅದರ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಚೀನಾಕ್ಕೆ ಭಾರತ ಎಚ್ಚರಿಸಿದೆ.
ಬೆಂಗಳೂರು (ಜೂ. 28): ವಾಸ್ತವ ಗಡಿ ರೇಖೆ ವಿಚಾರಕ್ಕೆ ಸಂಬಂಧಿಸಿದಂತೆ ಭಾರತದ ಜೊತೆ ಸಂಘರ್ಷಕ್ಕಿಳಿದಿರುವ ಚೀನಾಕ್ಕೆ ಭಾರತ ಕಠಿಣ ಸಂದೇಶ ರವಾನಿಸಿದೆ. ಗಡಿರೇಖೆಯಲ್ಲಿ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳದೆ ಸೇನಾಪಡೆಗಳನ್ನು ನಿಯೋಜಿಸುವ ಮೂಲಕ ಚೀನಾ ಕೇವಲ ಶಾಂತಿಯನ್ನಷ್ಟೇ ಅಲ್ಲದೆ, ಉಭಯ ರಾಷ್ಟ್ರಗಳ ಮಧ್ಯೆಯ ಬಾಂಧವ್ಯವನ್ನು ಸಹ ಕದಡುತ್ತಿದೆ. ಹೀಗಾಗಿ, ಪೂರ್ವ ಲಡಾಖ್ನಲ್ಲಿ ಚೀನಾ ನಡೆಸುತ್ತಿರುವ ಕಾರ್ಯ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸಬೇಕು. ಇಲ್ಲದಿದ್ದರೆ ಅದರ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಚೀನಾಕ್ಕೆ ಭಾರತ ಎಚ್ಚರಿಸಿದೆ.
ಚೀನಾ ತಂಟೆಗೆ ಭಾರತದ ಮಿಸೈಲ್ ಸಡ್ಡು: ಡ್ರ್ಯಾಗನ್ ವಿರುದ್ಧ ಮಹತ್ತರ ಹೆಜ್ಜೆ!
ವಿಶ್ವದ ದೊಡ್ಡಣ್ಣ ಅಮೆರಿಕಾ ಭಾರತದ ಪರ ನಿಲ್ಲುವುದಾಗಿ ಘೋಷಣೆ ಮಾಡಿದಾಗಿನಿಂದ ಇನ್ನಷ್ಟು ಆನೆಬಲ ಬಂದಂತಾಗಿದೆ. ಜೊತೆ ಜಪಾನ್, ಅಮೆರಿಕಾ, ಆಸ್ಟ್ರೇಲಿಯಾ ಹಾಗೂ ಭಾರತ ಸೇರಿ ಒಂದು ರಕ್ಷಣಾ ವ್ಯವಸ್ಥೆ ರೂಪಿಸಿವೆ. ಅದುವೆ 'QUAD'. ಚೀನಾವನ್ನು ಮಟ್ಟ ಹಾಕಲು ಇದು ಸಹಕಾರಿ. ಏನಿದು QUAD? ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ? ಇಲ್ಲಿದೆ ನೋಡಿ..!