ವಿಜಯಪುರ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್‌ ಪ್ರಾಯೋಗಿಕ ರೈಲು ಸಂಚಾರ ಇಂದಿನಿಂದ ಆರಂಭವಾಗಲಿದೆ. ಡಿಸೆಂಬರ್‌ವರೆಗೆ ರೈಲು ಸಂಚರಿಸಲಿದೆ.

ಕೊಟ್ಟೂರು [ಅ.22]: ವಿಜಯಪುರ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್‌ ಪ್ರಾಯೋಗಿಕ ರೈಲು ಸಂಚಾರ ಇಂದಿನಿಂದ ಆರಂಭಗೊಳ್ಳಲಿದ್ದು ಡಿ.21ರವರೆಗೆ ಸಂಚರಿಸಲಿದೆ ಎಂದು ನೈಋುತ್ಯ ರೈಲ್ವೆ ವಲಯ ಅಧಿಕಾರಿಗಳು ತಿಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರತಿ ಮಧ್ಯಾಹ್ನ 1 ಗಂಟೆಗೆ ವಿಜಯಪುರದಿಂದ ಹೊರಡುವ ರೈಲು ಅಲಮಟ್ಟಿ, ಬಾಗಲಕೋಟೆ, ಬಾದಾಮಿ, ಹೊಳೆಆಲೂರು, ಗದಗ, ಕೊಪ್ಪಳ ಮೂಲಕ ಹೊಸಪೇಟೆಗೆ ಬರಲಿದ್ದು, ನಂತರ ಹಗರಿಬೊಮ್ಮನಹಳ್ಳಿ ಮೂಲಕ ರಾತ್ರಿ 8.22ಕ್ಕೆ ಕೊಟ್ಟೂರಿಗೆ ಆಗಮಿಸಲಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹರಪನಹಳ್ಳಿ ಮೂಲಕ ದಾವಣಗೆರೆಗೆ ರಾತ್ರಿ 10.15ಕ್ಕೆ ತಲುಪಲಿದೆ. ಅಲ್ಲಿಂದ ಚಿಕ್ಕಜಾಜೂರು, ಕಡೂರು, ಅರಸೀಕೆರೆ, ತಿಪಟೂರು, ತುಮಕೂರು ಮೂಲಕ ಯಶವಂತಪುರ ತಲುಪಲಿದೆ. ಯಶವಂತಪುರದಿಂದ ಸಂಜೆ 5.45ಕ್ಕೆ ಬಿಡುವ ರೈಲು ಕೊಟ್ಟೂರಿಗೆ ರಾತ್ರಿ 12.30ಕ್ಕೆ ಬರಲಿದೆ. ವಿಜಯಪುರವನ್ನು ಬೆಳಗ್ಗೆ 8.30ಕ್ಕೆ ತಲುಪಲಿದೆ.