* ಕಂದಹಾರ್‌, ಹೆರಾತ್‌ ಕಚೇರಿಗಳ ಮೇಲೆ ದಾಳಿ* ಭಾರತೀಯ ರಾಯಭಾರ ಕಚೇರಿ ಮೇಲೆ ಉಗ್ರ ದಾಳಿ* ದಾಖಲೆ, ವಾಹನ ಹೊತ್ತೊಯ್ದ ಉಗ್ರರು

ಕಾಬೂಲ್‌(ಆ.21): ಅಷ್ಘಾನಿಸ್ತಾನದ ಕಂದಹಾರ್‌ ಮತ್ತು ಹೆರಾತ್‌ನಲ್ಲಿರುವ ಭಾರತದ ದೂತವಾಸ ಕಚೇರಿಯ ಮೇಲೆ ತಾಲಿಬಾನ್‌ ದಾಳಿ ನಡೆಸಿದ್ದು, ಕೆಲವು ದಾಖಲೆಗಳನ್ನು ಹಾಗೂ ಹೊರಗಡೆ ನಿಲ್ಲಿಸಲಾದ ವಾಹನಗಳನ್ನು ಹೊತ್ತೊಯ್ದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾರತ ಅಷ್ಘಾನಿಸ್ತಾನದಲ್ಲಿ ನಾಲ್ಕು ದೂತವಾಸ ಕಛೇರಿಗಳನ್ನು ಹೊಂದಿದೆ. ಕಂದಹಾರ್‌, ಹೆರಾತ್‌, ಮಜತ್‌-ಇ-ಷರೀಫ್‌ನಲ್ಲಿರುವ ಕಚೇರಿಗಳನ್ನು ತಾಲಿಬಾನ್‌ ಆಕ್ರಮಣದ ನಂತರ ಮುಚ್ಚಲಾಗಿತ್ತು. ರಕ್ಷಣಾ ಕಾರ್ಯಾಚರಣೆಯ ಸಂಬಂಧ ಕಾಬೂಲ್‌ನಲ್ಲಿರುವ ಕಚೇರಿ ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ಶುಕ್ರವಾರ ತಾಲಿಬಾನ್‌ ಉಗ್ರರು ಮುಚ್ಚಿರುವ ಕಂದಹಾರ್‌ ಮತ್ತು ಹೆರಾತ್‌ ದೂತವಾಸ ಕಚೇರಿಗಳಿಗೆ ನುಗ್ಗಿ ತಪಸಣೆ ನಡೆಸಿದ್ದಾರೆ.

ಅಲ್ಲಿರುವ ವಸ್ತುಗಳನ್ನು ಚಲ್ಲಾಪಿಲ್ಲಿಗೊಳಿಸಿದ ಉಗ್ರರು, ಕೊನೆಗೆ ಕೈಗೆ ಸಿಕ್ಕ ಕೆಲವೊಂದು ದಾಖಲೆಗಳನ್ನು ಹೊತ್ತೊಯ್ದಿದ್ದಾರೆ. ಆದರೆ ಕಾಬೂಲ್‌ನಲ್ಲಿ ಅಂಥ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಥಳೀಯರು ಹೇಳಿದ್ದಾರೆ.

ಅಷ್ಘಾನಿಸ್ತಾನದಲ್ಲಿದ್ದ ಎಲ್ಲಾ ಭಾರತೀಯ ದೂತಾವಾಸ ಸಿಬ್ಬಂದಿಗಳನ್ನು ಈಗಾಗಲೇ ಸ್ವದೇಶಕ್ಕೆ ಕರೆತರಲಾಗಿದೆ.