'ಆಪರೇಷನ್ ಸಿಂದೂರ' ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯಿಂದ ಧ್ವಂಸಗೊಂಡಿದ್ದ ಪಾಕಿಸ್ತಾನದ ಬಹಾವಲ್ಪುರದಲ್ಲಿರುವ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಪ್ರಧಾನ ಕಚೇರಿಯನ್ನು ಪುನರ್ ನಿರ್ಮಿಸಲಾಗಿದೆ. ಈ ಮರುನಿರ್ಮಾಣಕ್ಕೆ ಪಾಕಿಸ್ತಾನ ಸರ್ಕಾರವೇ 25 ಕೋಟಿ ಪಾಕಿಸ್ತಾನಿ ರುಪಾಯಿ ನೀಡಿರುವುದು ವರದಿಯಾಗಿದೆ.
ಲಾಹೋರ್: ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರು ನಡೆಸಿದ ಹಿಂದೂ ನರಮೇಧಕ್ಕೆ ಪ್ರತಿಯಾಗಿ ಭಾರತ ಕೈಗೊಂಡಿದ್ದ ಸೇನಾ ಕಾರ್ಯಾಚರಣೆ ‘ಆಪರೇಷನ್ ಸಿಂದೂರ’ದ ವೇಳೆ ಧ್ವಂಸಗೊಂಡಿದ್ದ ಪಾಕಿಸ್ತಾನದ ಬಹಾವಲ್ಪುರದಲ್ಲಿರುವ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಪ್ರಧಾನ ನೆಲೆಯನ್ನು (ಹೆಡ್ಕ್ವಾರ್ಟರ್) ಸಂಪೂರ್ಣವಾಗಿ ಪುನರ್ ನಿರ್ಮಿಸಲಾಗಿದೆ.
ಭಾರತೀಯ ಸಶಸ್ತ್ರ ಪಡೆಗಳು ಜೈಷ್ ಪ್ರಧಾನ ಕಚೇರಿಯ ಮೇಲೆ 15 ತಿಂಗಳ ಹಿಂದೆ ದಾಳಿ ಮಾಡಿದ್ದವು. ಆದರೆ ಈಗ ಮಾಧ್ಯಮಗಳಿಗೆ ಲಭ್ಯವಾಗಿರುವ ದೃಶ್ಯಗಳು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಶಿಬಿರವನ್ನು ಅಮೃತಶಿಲೆ, ಬಣ್ಣ ಮತ್ತು ಪ್ಲಾಸ್ಟರ್ ಬಳಸಿ ಪುನಃಸ್ಥಾಪಿಸಲಾಗಿದೆ ಎಂದು ತೋರಿಸುತ್ತವೆ.
ಮರ್ಕಜ್ ಸುಭಾನಲ್ಲಾದ ಕೇಂದ್ರ ಸಭಾಂಗಣ
ಮಸೀದಿ ಇರುವ ಈ ನೆಲೆಯ ಮರುನಿರ್ಮಾಣಕ್ಕೆ ಪಾಕಿಸ್ತಾನ ಸರ್ಕಾರವೇ 25 ಕೋಟಿ ಪಾಕಿಸ್ತಾನಿ ರು. ನೀಡಿದೆ. ಇದರಲ್ಲಿ ಸುಮಾರು 11 ಕೋಟಿ ರು.ಗಳನ್ನು ಮರ್ಕಜ್ ಸುಭಾನಲ್ಲಾದ ಕೇಂದ್ರ ಸಭಾಂಗಣವನ್ನುಮರುಸ್ಥಾಪಿಸಲು ಖರ್ಚು ಮಾಡಲಾಗಿದೆ ಎಂದು ವರದಿಗಳು ಹೇಳಿವೆ.
ಕಳೆದ ವರ್ಷ ಏಪ್ರಿಲ್ನಲ್ಲಿ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಪಡೆಯು ಮೇ 7, 2025 ರಂದು ಜೆಇಎಂ ಪ್ರಧಾನ ಕಚೇರಿಯ ಮೇಲೆ ದಾಳಿ ಮಾಡಿತ್ತು.


