CAA ಜಾರಿಯ ಕಾರಣ ಹೇಳಿದ ಪಾಕ್ ಪ್ರಧಾನಿ| ‘ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು CAA ಜಾರಿ’| ‘ಮೋದಿ ಸರ್ಕಾರದಡಿಯಲ್ಲಿ ಭಾರತ ಪ್ಯಾಸಿಸ್ಟ್ ಸಿದ್ದಾಂತವನ್ನು ಅಪ್ಪಿಕೊಂಡಿದೆ’| ಬಹುತ್ವ ಭಾರತ ಬಯಸುವ ಭಾರತೀಯರಿಂದ CAA ವಿರುದ್ಧ ಪ್ರತಿಭಟನೆ|

ಇಸ್ಲಾಮಾಬಾದ್(ಡಿ.22): ದೇಶದಲ್ಲಿನ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ.

Add Asianetnews Kannada as a Preferred SourcegooglePreferred

ಮೋದಿ ಸರ್ಕಾರದಡಿಯಲ್ಲಿ ಭಾರತ ಪ್ಯಾಸಿಸ್ಟ್ ಸಿದ್ದಾಂತವನ್ನು ಅಪ್ಪಿಕೊಂಡಿದ್ದು, ಹಿಂದೂ ರಾಷ್ಟ್ರದ ಕಡೆಗೆ ಸಾಗುತ್ತಿದೆ ಎಂದು ಇಮ್ರಾನ್ ಖಾನ್ ಸರಣಿ ಟ್ವಿಟ್ ಮೂಲಕ ಕಿಡಿಕಾರಿದ್ದಾರೆ.

ಮೋದಿ ಪ್ರತಿಕೃತಿ ಸುಡಿ, ಸಾರ್ವಜನಿಕ ಆಸ್ತಿಯನ್ನಲ್ಲ: ಪ್ರಧಾನಿ!

ಪೌರತ್ವ ತಿದ್ದುಪಡಿ ಕಾಯ್ದೆಯೊಂದಿಗೆ ಬಹುತ್ವ ಭಾರತ ಬಯಸುವವರು ಪ್ರತಿಭಟನೆಗೆ ಇಳಿದಿದ್ದು, ಇದು ಆಂದೋಲನವಾಗಿ ರೂಪುಗೊಳ್ಳುತ್ತಿದೆ ಎಂದು ಇಮ್ರಾನ್ ಅಭಿಪ್ರಾಯಪಟ್ಟಿದ್ದಾರೆ.

Scroll to load tweet…

ಭಾರತದಿಂದ ಪಾಕಿಸ್ತಾನಕ್ಕೆ ಬೆದರಿಕೆ ಹೆಚ್ಚಾಗಿದ್ದು, ಈ ಬೆದರಿಕೆಯನ್ನು ಪಾಕಿಸ್ತಾನ ಸಮರ್ಥವಾಗಿ ನಿಭಾಯಿಸಲಾಗುವುದು ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

ಎದೆ ಬಗೆದರೆ ಎರಡಕ್ಷರ ಇಲ್ಲದವರಿಂದ ಪ್ರತಿಭಟನೆ : ಪೌರತ್ವದ ಕಿಚ್ಚಿಗೆ ತೇಜಸ್ವಿ ತುಪ್ಪ!

ಭಾರತ ಯಾವುದೇ ರೀತಿಯ ಪ್ರಚೋದನಾತ್ಮಕ ಕ್ರಮಕ್ಕೆ ಮುಂದಾದರೆ ಸೂಕ್ತ ಪ್ರತ್ಯುತ್ತರ ನೀಡಲು ಪಾಕಿಸ್ತಾನ ಸಶಕ್ತವಾಗಿದೆ ಎಂದು ಪಾಕ್ ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ.