ಕನ್ನಡಮಿತ್ರರ ‘ಕನ್ನಡ ಪಾಠಶಾಲೆ’ಗೆ ಈಗ ದಶಮಾನೋತ್ಸವ ಸಂಭ್ರಮ. ಈ ಹಿನ್ನೆಲೆಯಲ್ಲಿ ಕನ್ನಡ ಭಾಷೆ ಬೆಳವಣಿಗೆಗೆ ಕೊಡುಗೆ ನೀಡಿದವರಿಗೆ ‘ಕನ್ನಡ ಮಿತ್ರ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡಪ್ರಭ-ಸುವರ್ಣ ನ್ಯೂಸ್ ಚೀಫ್ ಮೆಂಟರ್ ರವಿ ಹೆಗಡೆ ಅವರಿಗೆ ಕನ್ನಡ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅರಬರ ನಾಡಿನಲ್ಲಿ ಕನ್ನಡ ಡಿಂಡಿಮ ಮೊಳಗಿದೆ. ಮುಂದಿನ ಪೀಳಿಗೆಗೆ ಕನ್ನಡ ಉಳಿಸಲು ಪಣ ತೊಟ್ಟ ದುಬೈ ಕನ್ನಡಿಗರಿಂದ ಆರಂಭವಾಗಿದ್ದೇ ದುಬೈ ಕನ್ನಡ ಪಾಠಶಾಲೆ. ಅನಿವಾಸಿ ಭಾರತೀಯರಿಗೆ ವಿಶ್ವದ ಅತಿದೊಡ್ಡ ಉಚಿತ ಕನ್ನಡ ಶಾಲೆ ಇದಾಗಿದ್ದು, 870 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದು 19 ಶಿಕ್ಷಕರು, 60 ಸ್ವಯಂಸೇವಕರು ಕಾರ್ಯನಿರ್ವಹಿಸುತ್ತಿದ್ದಾರೆ. 

Add Asianetnews Kannada as a Preferred SourcegooglePreferred

ಕನ್ನಡಮಿತ್ರರ ‘ಕನ್ನಡ ಪಾಠಶಾಲೆ’ಗೆ ಈಗ ದಶಮಾನೋತ್ಸವ ಸಂಭ್ರಮ. ಈ ಹಿನ್ನೆಲೆಯಲ್ಲಿ ಕನ್ನಡ ಭಾಷೆ ಬೆಳವಣಿಗೆಗೆ ಕೊಡುಗೆ ನೀಡಿದವರಿಗೆ ‘ಕನ್ನಡ ಮಿತ್ರ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡಪ್ರಭ-ಸುವರ್ಣ ನ್ಯೂಸ್ ಚೀಫ್ ಮೆಂಟರ್ ರವಿ ಹೆಗಡೆ ಅವರಿಗೆ ಕನ್ನಡ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 ದುಬೈ ಕನ್ನಡ ಮಿತ್ರರು ಸಮಿತಿ ಅಧ್ಯಕ್ಷ ಶಶಿಧರ್ ನಾಗರಾಜಪ್ಪ, ಉಪಾಧ್ಯಕ್ಷ ಸಿದ್ದಲಿಂಗೇಶ್​ ಬಿ.ಆರ್, ಮುಖ್ಯ ಕಾರ್ಯದರ್ಶಿ ಸುನೀಲ್ ಗವಾಸ್ಕರ್​, ಖಜಾಂಜಿ ನಾಗರಾಜ್​ ರಾವ್, ಜಂಟಿ ಕಾರ್ಯದರ್ಶಿ ಶಿವಶರಣಪ್ಪ ಮೇಟಿ ಹಾಜರಿದ್ದರು.