ನ.19ರಂದು ಏರಿಂಡಿಯಾ ವಿಮಾನದಲ್ಲಿ ಪ್ರಯಾಣ ಮಾಡಿದರೆ ನಿಮ್ಮ ಪ್ರಾಣಕ್ಕೆ ಅಪಾಯವೊದಗಲಿದೆ ಎಂದು ಖಲಿಸ್ತಾನಿ ಉಗ್ರ ಗುರುಪಂತ್ ಸಿಂಗ್ ಪನ್ನೂ ಎಚ್ಚರಿಕೆ ನೀಡಿದ್ದಾನೆ.

ನವದೆಹಲಿ: ನ.19ರಂದು ಏರಿಂಡಿಯಾ ವಿಮಾನದಲ್ಲಿ ಪ್ರಯಾಣ ಮಾಡಿದರೆ ನಿಮ್ಮ ಪ್ರಾಣಕ್ಕೆ ಅಪಾಯವೊದಗಲಿದೆ ಎಂದು ಖಲಿಸ್ತಾನಿ ಉಗ್ರ ಗುರುಪಂತ್ ಸಿಂಗ್ ಪನ್ನೂ ಎಚ್ಚರಿಕೆ ನೀಡಿದ್ದಾನೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೆಲ ದಿನಗಳ ಹಿಂದಷ್ಟೇ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನಾ ಪಂದ್ಯ ನಡೆಯಲಿರುವ ಗುಜರಾತ್‌ನ ಅಹಮದಾಬಾದ್ ಸ್ಟೇಡಿಯ೦ಗೆ (Ahmedabad stadium) ನುಗ್ಗುವುದಾಗಿ ಬೆದರಿಕೆ ಹಾಕಿದ್ದ ಇದೇ ಪನ್ನೂ ಇದೀಗ ವಿಶ್ವಕಪ್ ಫೈನಲ್ (World Cup cricket)ನಡೆಯುವ ದಿನದಂದು ಭಾರೀ ಅನಾಹುತದ ಎಚ್ಚರಿಕೆ ನೀಡಿದ್ದಾನೆ.

ರಾಜತಾಂತ್ರಿಕ ಬಿಕ್ಕಟ್ಟಿನ ನಂತರ ಕೆನಡಾ ಜನರಿಗೆ ವೀಸಾ ಸೇವೆ ಮರು ಆರಂಭಿಸಿದ ಭಾರತ

ಈ ಕುರಿತಾಗಿ ಪನ್ನು ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, 'ನ.19ರಂದು ಸಿಖ್ಖರು ಯಾವುದೇ ಕಾರಣಕ್ಕೂ ಏರಿಂಡಿಯಾ ವಿಮಾನದಲ್ಲಿ ಪ್ರಯಾಣ ಮಾಡಬೇಡಿ, ಮಾಡಿದರೆ ನಿಮ್ಮ ಪ್ರಾಣಕ್ಕೆ ತೊಂದರೆಯಾಗಬಹುದು. ನ.19ರಂದು ಜಾಗತಿಕವಾಗಿ ಏರಿಂಡಿಯಾ ಮೇಲೆ ಮುತ್ತಿಗೆ ಹಾಕಲಾಗುತ್ತದೆ' ಎಂದು ಹೇಳಿದ್ದಾನೆ.

ಯಾರು ಈ ಪನ್ನು?

ಈತ ನಿಷೇಧಿತ ಸಿಖ್ಸ್‌ ಫಾರ್ ಜಸ್ಟೀಸ್ ಸಂಘಟನೆಯ (Sikhs for Justice organization) ಮುಖ್ಯಸ್ಥ, ಕೆನಡಾ ವಾಸಿ, ಈತನ ವಿರುದ್ಧದೇಶ ದ್ರೋಹ ಸೇರಿದಂತೆ 22ಕ್ಕೂ ಹೆಚ್ಚು ಕ್ರಿಮಿನಲ್‌ ಪ್ರಕರಣ ಗಳಿವೆ. ಭಾರತದ ವಿರೋಧಿ ಕೃತ್ಯಗಳಲ್ಲಿ ಈತ ಸಕ್ರಿಯ. 1985ರಲ್ಲಿ ಕೆನಡಾದಿಂದ ಭಾರತಕ್ಕೆ ಬರುತ್ತಿದ್ದ ಏರಿಂಡಿಯಾ (Air India) ವಿಮಾನದಲ್ಲಿ ಬಾಂಬ್ ಸ್ಫೋಟಿಸಿ, 24 ಭಾರತೀಯರು ಸೇರಿದಂತೆ 320 ಜನರ ಸಾವಿಗೆ ಖಲಿಸ್ತಾನಿ ಉಗ್ರರು ಕಾರಣವಾಗಿದ್ದರು. ಜೊತೆಗೆ 1981ರಲ್ಲಿ ಏರಿಂಡಿಯಾ ವಿಮಾನ ಹೈಜಾಕ್ ಮಾಡಿದ್ದರು.

ನಿಜ್ಜರ್ ಹತ್ಯೆಯ ಸಾಕ್ಷ್ಯ ಭಾರತಕ್ಕೆ ಕೊಡಲ್ಲ ಕೋರ್ಟಿಗೆ ಕೊಡೇವೆ: ಕೆನಡಾ