ಕತಾರ್ ಭಾರತ ಮೂಲದ ಆಡಳಿತ ಸಮಿತಿಯ ಚುನಾವಣೆ/ ಅವಿರೋಧ ಆಯ್ಕೆಯಾದ ಸುಬ್ರಮಣ್ಯ ಹೆಬ್ಬಾಗಿಲು/ ಕನ್ನಡಿಗರ ಹಿತ  ಕಾಪಾಡಿಕೊಂಡು ಬಂದಿದ್ದಾರೆ

ಕತಾರ್(ಜ. 19) ಕತಾರ್ ಭಾರತ ಮೂಲದ ಆಡಳಿತ ಸಮಿತಿಯ ಚುನಾವಣೆಯಲ್ಲಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಅತಿ ಹೆಚ್ಚು ಮತಗಳನ್ನು ಪಡೆದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಸಾಂಸ್ಕೃತಿಕ ಕೇಂದ್ರದ ಮುಂದಿನ 2 ವರ್ಷಗಳ ಆಡಳಿತ ಸಮಿತಿಗೆ ಸುಬ್ರಮಣ್ಯ ಅವರು ಆಯ್ಕೆಯಾಗಿದ್ದಾರೆ. ಬೈಂದೂರು ಮೂಲದ ಸುಬ್ರಮಣ್ಯ, ಕಳೆದ ಒಂದು ದಶಕದಿಂದ ಕತಾರಿನಲ್ಲಿ ನೆಲೆಸಿರುವ ಭಾರತೀಯರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಡಿಜಿಪೋಲ್' ಎಂಬ ತಂತ್ರಾಂಶವನ್ನು (ಮೊಬೈಲ್ ಎಪ್) ಪ್ರತ್ಯೇಕವಾಗಿ ಈ ಚುನಾಣೆಗೆಂದೇ ಮಾಡಲಾಗಿತ್ತು ಹಾಗೂ ಪ್ರತಿಯೊಬ್ಬರ ಮೊಬೈಲ್ ಗೆ ಇನ್ ಸ್ಟಾಲ್ ಮಾಡಲಾಗಿತ್ತು ಇದರ ಪರಿಣಾಮ ಎಂಬಂತೆ ಶೇ. 90 ಮತದಾನ ಆಯಿತು.

ಕತಾರ್‌ನಲ್ಲಿ ಜಯಭೇರಿ ಬಾರಿಸಿದ ಕನ್ನಡಿಗರಿಗೆ ಸನ್ಮಾನ

 ಸುಬ್ರಮಣ್ಯ ಈ ಹಿಂದೆ ಭಾರತೀಯ ಸಮುದಾಯ ಹಿತೈಷಿ ವೇದಿಕೆ (ಐ.ಸಿ.ಬಿ.ಎಫ್) ಯ ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಮತ್ತು ಅದಕ್ಕೂ ಪೂರ್ವದಲ್ಲಿ ಕರ್ನಾಟಕ ಸಂಘ ಕತಾರಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.