ಬಾಂಗ್ಲಾದೇಶದಲ್ಲಿ 300ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಹಾಗೂ ಪ್ರಧಾನಿ ಶೇಖ್‌ ಹಸೀನಾ ಪದತ್ಯಾಗ ಮತ್ತು ಪಲಾಯನಕ್ಕೆ ಕಾರಣವಾದ ವಿದ್ಯಾರ್ಥಿ ಹಿಂಸಾಚಾರ ಹಿಂದೆ ಮೀಸಲಾತಿ ವ್ಯವಸ್ಥೆಯ ವಿರುದ್ಧದ ಆಕ್ರೋಶದ ಕತೆಯಿದೆ.

ಢಾಕಾ: ಬಾಂಗ್ಲಾದೇಶ ವಿಮೋಚನಾ ಹೋರಾಟಗಾರರ ಕುಟುಂಬಕ್ಕೆ ಶೇ.30 ಮೀಸಲು ಮಿತಿಯನ್ನು ಸುಪ್ರೀಂ ಕಡಿತಗೊಳಿಸಿದ ಬಳಿಕವೂ, ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರವಾಗಲು ಪ್ರಧಾನಿ ಶೇಖ್ ಹಸೀನಾ ನೀಡಿದ ರಜಾಕಾರರು ಹೇಳಿಕೆಯೇ ಕಾರಣ ಎನ್ನಲಾಗಿದೆ. ವಿಮೋಚನಾ ಹೋರಾಟಗಾರರಿಗೆ ಮೀಸಲು ನೀಡದೇ, ಬಾಂಗ್ಲಾ ವಿರೋಧಿಸುವ ರಜಾಕಾರರಿಗೆ ನೀಡಬೇಕಾ ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ತಮ್ಮನ್ನೇ ಉದ್ದೇಶಿಸಿ ಆಡಿದ್ದು ಎಂದು ಆಕ್ರೋಶಗೊಂಡ ಯುವ ಸಮುದಾಯದ ತಮ್ಮ ಹೋರಾಟವನ್ನು ಹಸೀನಾ ರಾಜೀನಾಮೆಗೆ ತಿರುಗಿಸಿ, ಪ್ರತಿಭಟನೆ ತೀವ್ರಗೊಳಿಸಿತು ಎನ್ನಲಾಗಿದೆ. 1971ರ ಬಾಂಗ್ಲಾ ವಿಮೋ ಚನೆ ಹೋರಾಟದ ವೇಳೆ ಪಾಕಿಸ್ತಾನಿ ಸೇನೆಯನ್ನು ಬೆಂಬಲಿಸಿದ ದೇಶದ್ರೋಹಿಗಳಿಗೆ ರಜಾಕಾರರು ಎನ್ನುತ್ತಾರೆ.

Add Asianetnews Kannada as a Preferred SourcegooglePreferred

ಬಾಂಗ್ಲಾದೇಶದಲ್ಲಿ 300ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಹಾಗೂ ಪ್ರಧಾನಿ ಶೇಖ್‌ ಹಸೀನಾ ಪದತ್ಯಾಗ ಮತ್ತು ಪಲಾಯನಕ್ಕೆ ಕಾರಣವಾದ ವಿದ್ಯಾರ್ಥಿ ಹಿಂಸಾಚಾರ ಹಿಂದೆ ಮೀಸಲಾತಿ ವ್ಯವಸ್ಥೆಯ ವಿರುದ್ಧದ ಆಕ್ರೋಶದ ಕತೆಯಿದೆ. ಬಾಂಗ್ಲಾ ವಿಮೋಚನಾ ಹೋರಾಟಗಾರರ ಕುಟುಂಬಕ್ಕೆ ಶೇ.30 ಮೀಸಲು ನೀಡುವ ಹಸೀನಾ ಇರಾದೆಯು ದೇಶವನ್ನು ಅರಾಜಕತೆಗೆ ತಳ್ಳಿದೆ.ಬಾಂಗ್ಲಾದೇಶವು ಪಾಕಿಸ್ತಾನದಿಂದ ಪ್ರತ್ಯೇಕಗೊಂಡು 1971ರಲ್ಲಿ ಪ್ರತ್ಯೇಕ ದೇಶವಾಗಿ ಉದಯವಾಯಿತು. ಇದಕ್ಕೆ ಬಾಂಗ್ಲಾ ವಿಮೋಚನಾ ಹೋರಾಟ ಎಂದೂ ಹೆಸರು. ಹೊಸ ಬಾಂಗ್ಲಾದೇಶ ರಚನೆ ನಂತರ ಅಧಿಕಾರಕ್ಕೆ ಬಂದ ಶೇಖ್‌ ಮುಜಿಬುರ್‌ ರೆಹಮಾನ್‌ ಅವರು (ಶೇಖ್‌ ಹಸೀನಾ ತಂದೆ), ವಿಮೋಚನಾ ಹೋರಾಟಗಾರರಿಗೆ ಹಾಗೂ ಪಾಕ್‌ನಿಂದ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲು ನೀಡಿದರು. ಆದರೆ ರೆಹಮಾನ್‌ ನಂತರ ಬಂದ ಸರ್ಕಾರಗಳು ಸಮಾಜದ ವಿವಿಧ ವರ್ಗಗಳಿಗೆ ಮೀಸಲು ವಿಸ್ತರಿಸಿದ್ದವು.

ಬಾಂಗ್ಲಾ ಪ್ರಧಾನಿ ಮನೆಯಲ್ಲಿ ಪ್ರತಿಭಟನಾಕಾರರ ದರೋಡೆ, ಶೇಖ್‌ ಹಸಿನಾರ 'ಬ್ರಾ..' ಕೂಡ ಬಿಡದ ಲೂಟಿಕೋರರು!

ಆದರೆ ವಿವಿಧ ವರ್ಗಗಳಿಗೆ ಇದ್ದ ಮೀಸಲನ್ನು ಇತ್ತೀಚೆಗೆ ರದ್ದು ಮಾಡಿದ್ದ ಶೇಖ್ ಹಸೀನಾ, 1971ರ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಸದಸ್ಯರಿಗೆ ಮಾತ್ರ 30 ಪ್ರತಿಶತದಷ್ಟು ಸರ್ಕಾರಿ ಉದ್ಯೋಗಗಳನ್ನು ಕಾಯ್ದಿರಿಸುವ ತೀರ್ಮಾನ ಕೈಗೊಂಡರು. ಹೀಗಾಗಿ ಈಗ ಸೃಷ್ಟಿ ಆಗಿರುವ ಅರಾಜಕತೆಯ ಮೂಲವು ಈ ವಿವಾದಾತ್ಮಕ ಕೋಟಾದಲ್ಲಿ ಅಡಗಿದೆ.

ಈ ವ್ಯವಸ್ಥೆಯು ತಾರತಮ್ಯದಿಂದ ಕೂಡಿದೆ ಮತ್ತು ಪ್ರಧಾನಿ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಬೆಂಬಲಿಗರಿಗೆ ಅನುಕೂಲವಾಗಿದೆ ಎಂದು ಜಮಾತೆ ಇಸ್ಲಾಮಿ ಎಂಬ ಕಟ್ಟರ್‌ವಾದಿ ಮುಸ್ಲಿಂ ಪಕ್ಷ ಹಾಗೂ ಅದರ ಅಧೀನದಲ್ಲಿ ಕೆಲಸ ಮಾಡುವ ವಿದ್ಯಾರ್ಥಿ ಹೋರಾಟಗಾರರು ಕಳೆದ ತಿಂಗಳು ಪ್ರತಿಭಟನೆ ಆರಂಭಿಸಿದರು. ವಿಮೋಚನಾ ಹೋರಾಟಗಾರರ ಕೋಟಾ ಬದಲು ಅರ್ಹತೆ ಆಧಾರಿತ ಮೀಸಲಿಗೆ ಆಗ್ರಹಿಸಿದರು. ಇದು ಹಿಂಸಾಚಾರಕ್ಕೆ ತಿರುಗಿ ಮೊದಲ ಹಂತದ ಹೋರಾಟದಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವಿಗೀಡಾದರು.

ಬಾಂಗ್ಲಾದೇಶ ಪ್ರಧಾನಿ ರಾಜೀನಾಮೆ, ಭಾರತಕ್ಕೆ ಓಡಿಬಂದ ಶೇಖ್‌ ಹಸೀನಾ!

ಈ ಹಂತದಲ್ಲಿ ಬಾಂಗ್ಲಾ ಕೋರ್ಟ್‌ ಮಧ್ಯಪ್ರವೇಶಿಸಿ ಮೀಸಲನ್ನು ಶೇ.5ಕ್ಕೆ ಇಳಿಸುವ ಆದೇಶ ಹೊರಡಿಸಿತ್ತು. ಆಗ ಹೋರಾಟ ಕೊಂಚ ತಣ್ಣಗಾದಂತೆ ಕಂಡುಬಂದರೂ ಬೂದಿ ಮುಚ್ಚಿದ ಕೆಂಡದಂತಿತ್ತು. ಇದರ ನಡುವೆ ಮೀಸಲು ವಿರುದ್ಧ ಹೋರಾಡಿದ ಜಮಾತೆ ಇಸ್ಲಾಮಿ ಪಕ್ಷ ಹಾಗೂ ವಿದ್ಯಾರ್ಥಿ ಸಂಘಟನೆಗಳನ್ನು ಹಸೀನಾ ನಿಷೇಧಿಸಿದರು ಹಾಗೂ ಹೋರಾಟದಲ್ಲಿನ ಬಂಧಿತ ನಾಯಕರನ್ನು ಬಿಡಬೇಕು ಎಂದು ವಿದ್ಯಾರ್ಥಿಗಳು ಹಿಡಿದ ಪಟ್ಟಿಗೆ ಹಸೀನಾ ಮಣಿಯಲಿಲ್ಲ. ಹೀಗಾಗಿ ಅವರ ರಾಜೀನಾಮೆಗೆ ಆಗ್ರಹಿಸಿ ಕಳೆದ ಶನಿವಾರ ಮತ್ತೆ ಹಿಂಸಾತ್ಮಕ ಹೋರಾಟ ಆರಂಭವಾಯಿತು ಹಾಗೂ 100 ಜನರನ್ನು ಬಲಿಪಡೆಯಿತು. ಪ್ರತಿಭಟನಾಕಾರರು ಹಸೀನಾ ನಿವಾಸಕ್ಕೆ ನುಗ್ಗಲು ಯತ್ನಿಸಿದಾಗ ಅವರು ರಾಜೀನಾಮೆ ನೀಡಿ ದೇಶ ಬಿಟ್ಟು ಪರಾರಿಯಾಗಿದ್ದಾರೆ.