Asianet Suvarna News Asianet Suvarna News

ಚಾಮರಾಜನಗರ: ಸಾಲಕ್ಕೆ ಹೆದರಿ ಕಾರ್ಪೆಂಟರ್‌ ಆತ್ಮಹತ್ಯೆ

ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದಾಗ ಚಿನ್ನಸ್ವಾಮಿ ಶವ ಪತ್ತೆಯಾಗಿದೆ. ಚಿನ್ನಸ್ವಾಮಿ ಚಾರಿ ಸಾವಿನ ಬಗ್ಗೆ ಅನುಮಾನವಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

Carpenter Committed Suicide at Gundlupete in Chamarajanagara grg
Author
First Published Nov 3, 2023, 4:00 AM IST

ಗುಂಡ್ಲುಪೇಟೆ(ನ.03): ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಶಿವಪುರ ಗ್ರಾಮದ ಕಲ್ಕಟ್ಟೆ ಕೆರೆಯಲ್ಲಿ ನಡೆದಿದೆ. ಪಟ್ಟಣದ ನಿವಾಸಿ ಕಾರ್ಪೆಂಟರ್ ಚಿನ್ನಸ್ವಾಮಿಚಾರಿ(50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. 

ಈ ಸಂಬಂಧ ಮೃತರ ಪುತ್ರ ಗುಂಡ್ಲುಪೇಟೆ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ ನ.1 ರಂದು ಬೆಳಗ್ಗೆ ಕೆಲಸಕ್ಕೆ ಹೋದ ಚಿನ್ನಸ್ವಾಮಿಚಾರಿ ರಾತ್ರಿಯಾದರೂ ಮನೆಗೆ ಬರಲಿಲ್ಲ. ನ.2 ರ ಬೆಳಗ್ಗೆ ಕಲ್ಕಟ್ಟೆ ಕೆರೆಯ ಬಳಿ ಚಿನ್ನಸ್ವಾಮಿಚಾರಿ ಚಪ್ಪಲಿ ಸಿಕ್ಕ ನಂತರ ಸಂಶಯಗೊಂಡ ಪುತ್ರ ಅಗ್ನಿಶಾಮಕ ದಳಕ್ಕೆ ವಿಚಾರ ತಿಳಿಸಿದ್ದಾರೆ.

ಬಟ್ಟ ಬಯಲಿನಲ್ಲಿ ಮಹಿಳೆಯ ಸೀರೆ ಹಿಡಿದೆಳೆದ ಪರಪುರುಷ: ಮನನೊಂದು ಆತ್ಮಹತ್ಯೆಗೆ ಶರಣಾದ ಗೃಹಿಣಿ

ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದಾಗ ಚಿನ್ನಸ್ವಾಮಿ ಶವ ಪತ್ತೆಯಾಗಿದೆ. ಚಿನ್ನಸ್ವಾಮಿ ಚಾರಿ ಸಾವಿನ ಬಗ್ಗೆ ಅನುಮಾನವಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

Follow Us:
Download App:
  • android
  • ios