ಲಕ್ಕುಂಡಿ ಮಾದರಿಯಲ್ಲಿ ರಾಜ್ಯಾಧ್ಯಂತ ಇರುವ ಐತಿಹಾಸಿಕ ಸ್ಮಾರಕ, ಶಿಲಾ ಶಾಸನ, ಕೋಟೆ ಕೊತ್ತಲುಗಳ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಶಿಕ್ಷಣ, ಅನ್ನ, ಆರೋಗ್ಯಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ ಕರ್ನಾಟಕ ಕುರುಬರ ಸಹಕಾರ ಪತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಲಕ್ಕುಂಡಿ ಗ್ರಾಮದಲ್ಲಿ ನಡೆಯಲಿರುವ ಉತ್ಖನನ ಕಾರ್ಯಕ್ರಮದ ಬ್ಯಾನರ್ನಲ್ಲಿ ಮಾಜಿ ಸಚಿವ ಬಿ.ಆರ್. ಯಾವಗಲ್ ಅವರ ಹೆಸರು ಕೈಬಿಟ್ಟಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾವು ನಮ್ಮ ಜೀವನದಲ್ಲಿ ಧರ್ಮ ಕಾರ್ಯಗಳನ್ನು ಮಾಡುತ್ತಿದ್ದೇವೆ. ಅಂತಹ ಕಾರ್ಯಗಳಲ್ಲಿ ಸರ್ವರೂ ಭಾಗವಹಿಸುವುದರಿಂದ ಮನಸ್ಸಿಗೆ ತೃಪ್ತಿ ಸಿಗುತ್ತದೆ. ಆದ್ದರಿಂದ ಧರ್ಮ ಕಾರ್ಯಗಳಲ್ಲಿ ತಪ್ಪದೇ ಎಲ್ಲರೂ ಭಾಗವಹಿಸಿ ಭಕ್ತಿ ಮೆರೆಯಬೇಕು ಎಂದು ಕಾಶಿ ಪೀಠದ ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರು ಹೇಳಿದರು.
ದೇಶದ ಅಮಾಯಕರ ಮೇಲೆ ಉಗ್ರರರು ನಡೆಸಿದ ಕೃತ್ಯಕ್ಕೆ ನಮ್ಮ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.
ಕೃಷಿ ಮಾಡಲು ಜನರು ಸಿಗ್ತಿಲ್ಲ ಎನ್ನೋ ಆರೋಪ ಇದೆ, ಇನ್ನು ನಗರಗಳಲ್ಲಿ ಕೂಡ ಮನೆಗೆಲಸ ಮಾಡೋದು ಕಷ್ಟ ಆಗಿದೆ. ಹೀಗಿರುವಾಗ ಬೆಂಗಳೂರಿನ ಸಾಫ್ಟ್ವೇರ್ ಉದ್ಯೋಗಿಯೋರ್ವರು ರೋಬೋಟ್ನಿಂದ ಅಡುಗೆ ಮಾಡುತ್ತಿದ್ದಾರೆ.
ಗ್ರಾಮೀಣ ಬದುಕನ್ನು ಎತ್ತರಿಸಲು ಮತ್ತು ಸುಸ್ಥಿರ ಅಭಿವೃದ್ಧಿ ಸಾಧಿಸಲೆಂದೇ ಜನ್ಮ ತಾಳಿರುವ ದೇಶದ ಏಕೈಕ ‘ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ’ಕ್ಕೆ ಕಳೆದ 1 ವರ್ಷದಿಂದ ಸಾರಥಿಯೇ ಇಲ್ಲ!
ವಿದ್ಯಾರ್ಥಿ ಕಾಂಗ್ರೆಸ್ನಲ್ಲಿ ಯುವಕನಾಗಿದ್ದ ನನಗೆ ಕರೆದು ದೇವೇಗೌಡ್ರ ಅಂತಾ ನಾಯಕರ ಎದುರು ಸ್ಪರ್ಧಿಸುವಂತೆ ಟಿಕೆಟ್ ನೀಡಿದ್ದು ಕೆ.ಎಚ್. ಪಾಟೀಲ ಅವರು. ಅವರಂಥ ಹಿರಿಯರ ಆಶೀರ್ವಾದವೇ ನಾನು ಬೆಳೆಯಲು ಕಾರಣವಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಕೇಂದ್ರ ಸರ್ಕಾರ ಜನಸಂಖ್ಯೆ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳನ್ನು ಮರು ವಿಂಗಡಣೆ ಮಾಡಲು ಮುಂದಾಗಿದ್ದು, ಇದರ ವಿರುದ್ಧ ನಾವೆಲ್ಲ ಒಗ್ಗಟ್ಟಾಗಿ ಹೋರಾಡಬೇಕು ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.
2017ರಲ್ಲಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 23 ಆರೋಪಿಗಳು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ. ಮರಳು ದಂಧೆಕೋರನ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಈ ಕೃತ್ಯ ಎಸಗಲಾಗಿತ್ತು. ಶಿಕ್ಷೆಯ ಪ್ರಮಾಣವನ್ನು ಮಾರ್ಚ್ 24 ರಂದು ಪ್ರಕಟಿಸಲಾಗುವುದು.