ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಸಂವಿಧಾನ ಬದಲಾವಣೆ ತಂದಿದೆ. ದೇಶದ ಸಂವಿಧಾನ ಮೂಲಕ್ಕೆ ವಿರುದ್ಧವಾಗಿ ತುರ್ತು ಪರಿಸ್ಥಿತಿ ಹೇರಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಸಿದ್ದರಾಮಯ್ಯ ಅವರನ್ನು ಮೊದಲಿನಿಂದ ನೋಡಿದ್ದೇನೆ, ಆದರೆ ಅವರು ಇಷ್ಟು ಅಸಹಾಯಕರಾಗಿ ಇರೋದನ್ನು ನೋಡೇ ಇರಲಿಲ್ಲ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿದೆ. ಅವರ ಬಳಿ ಶ್ವೇತಪತ್ರ ಇಲ್ಲ, ಬ್ಲ್ಯಾಕ್ಪೇಪರ್ ಇದೆ. ರಾಜ್ಯ ಸರ್ಕಾರ ಪ್ರತಿ ವ್ಯಕ್ತಿ ಮೇಲೆ ಹೆಚ್ಚುವರಿಯಾಗಿ ₹1 ಲಕ್ಷ ಸಾಲ ಹೊರಿಸುತ್ತಿದೆ. ಇದಕ್ಕಿಂತ ದೊಡ್ಡ ಶ್ವೇತಪತ್ರ ಬೇಕಾ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ರಾಣೇಬೆನ್ನೂರಿನ ಸಣ್ಣಸಂಗಾಪುರ ಗ್ರಾಮದಲ್ಲಿ 29 ವರ್ಷದ ಯುವಕ ಅವಿನಾಶ ಚಾವಡಿ ಮದುವೆ ಆಗದ ಖಿನ್ನತೆಯಿಂದ ನೇಣಿಗೆ ಶರಣಾಗಿದ್ದಾನೆ.ಈ ಘಟನೆ ಸಾಮಾಜಿಕ ಒತ್ತಡ ಮತ್ತು ಮಾನಸಿಕ ಆರೋಗ್ಯದ ಕುರಿತು ಚರ್ಚೆಗೆ ಕಾರಣವಾಗಿದೆ.
ಹಾವೇರಿಯಲ್ಲಿ ಬರ್ತಡೇ ಬ್ಯಾನರ್ ತೆರವು ವಿಚಾರದಲ್ಲಿ ನಡೆದ ಗಲಾಟೆ ದುರಂತ ಅಂತ್ಯ ಕಂಡಿದೆ. ನಗರಸಭೆ ಸಿಬ್ಬಂದಿ ರಂಗಪ್ಪ ಹೆರಕಲ್, ಅವಮಾನಕ್ಕೊಳಗಾಗಿ ವಿಷ ಸೇವಿಸಿ ಸಾವಿಗೆ ಯತ್ನಿಸಿದ್ದಾರೆ. ಆದರೆ, ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮದುವೆ ಸಮಾರಂಭದಲ್ಲಿ ಕುದಿವ ಸಾಂಬಾರು ಪಾತ್ರೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಬಾಲಕಿಯೊಬ್ಬಳು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಶುಕ್ರವಾರ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಲ್ಲಿ ನಡೆದಿದೆ.
ಶಾಲೆಯ ಮೆಟ್ಟಿಲು ತುಳಿಯದ ವ್ಯಕ್ತಿಯೊಬ್ಬರು ಸ್ವಯಂಸ್ಫೂರ್ತಿಯಿಂದ ಅಕ್ಷರ ಕಲಿತು ಕೃಷಿ ಕ್ಷೇತ್ರದಲ್ಲಿ ಅಬ್ಬಾ ಎನಿಸುವಂತೆ ಸಾಧನೆ ಮಾಡಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜೀವಂತ ಇರುವಾಗಲೇ ಸುಳ್ಳು ಅರ್ಜಿ ನೀಡಿ ತಾಯಿಯ ಮರಣ ಪ್ರಮಾಣಪತ್ರ ಪಡೆದು ವ್ಯಕ್ತಿಯೊಬ್ಬ ಆಸ್ತಿ ಕಬಳಿಸಲು ಪ್ರಯತ್ನಿಸಿ ಪೊಲೀಸರ ಅತಿಥಿಯಾದ ಘಟನೆ ಪಟ್ಟಣದ ಖಾಜೇಖಾನ್ ಗಲ್ಲಿಯಲ್ಲಿ ನಡೆದಿದೆ.